ವಿಜಯಪುರ: ರೇಡಿಯೋ ಜಾಕಿ ಕಾರ್ಯಾಗಾರ
ವಿಜಯಪುರ 22: ರೇಡಿಯೋದಲ್ಲಿ ನಾವು ಕಾರ್ಯನಿರ್ವಹಿಸುವ ಮೂಲಕ ನಾವು ಕೇಳುಗರ ಹೃದಯವನ್ನು ಮುಟ್ಟಬೇಕಾದರೆ ನಮ್ಮಲ್ಲಿ ಉತ್ತಮ ಭಾಷಾ ಶೈಲಿ, ಶಬ್ಧ ಬಂಡಾರವನ್ನು ಹೆಚ್ಚಿಸಿಕೊಳ್ಳಬೇಕಾಗಿದ್ದು ಅವಶ್ಯ ಎಂದು ಧಾರವಾಡ ಆಕಾಶವಾಣಿ ಕೇಂದ್ರದ ಡಾ.ಶಶಿಧರ ನರೇಂದ್ರ ಅಭಿಪ್ರಾಯಪಟ್ಟರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಹಾಗೂ ಬೆಂಗಳೂರು ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮೂರು ದಿನದ ರೇಡಿಯೋ ಜಾಕಿ ಕಾಯರ್ಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಹಾಯಕ ಪ್ರಾಧ್ಯಾಪಕಿ ಡಾ.ತಹಮೀನಾ ಕೋಲಾರ ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕ ಸಂದೀಪ ಪ್ರಾಸ್ತಾವಿಕ ಮಾತನಾಡಿದರು. ಸಂಶೋಧನಾ ಸಂಯೋಜಕಿ ದೀಪಾ ತಟ್ಟಿಮನಿ ಹಾಗೂ ಸಹ ಸಂಶೋಧಕಿ ಸೃಷ್ಟಿ ಜವಳೆಕರ ಅತಿಥಿಗಳ ಪರಿಚವಿಸಿದರು, ಸಂಶೋಧನಾ ವಿದ್ಯಾರ್ಥಿನಿ ಜ್ಞಾನಜ್ಯೋತಿ.ಅ.ಚಾಂದಕವಠೆ ನಿರೂಪಿಸಿದರು, ಸಂಶೋಧನಾ ವಿದ್ಯಾರ್ಥಿನಿ ಸುವರ್ಣ ಕಂಬಿ ವಂದಿಸಿದರು.
ಕಾರ್ಯಕ್ರಮದಲ್ಲಿ ರಾಜ್ಯದ ನಾನಾ ಜಿಲ್ಲೆಗಳ ಕಾಲೇಜುಗಳಿಂದ ಬಂದಂತಹ ವಿದ್ಯಾರ್ಥಿನಿಯರು, ವಿಭಾಗದ ವಿದ್ಯಾರ್ಥಿನಿಯರು ಮತ್ತು ವಿಭಾಗದ ಸಿಬ್ಬಂದಿ ಉಪಸ್ಥಿತರಿದ್ದರು.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 