ವಿಜಯಪುರ: ವಿಜ್ಞಾನ ವಸ್ತು ಪ್ರದರ್ಶನ: ಶಿರಿನಬಾನು ರಾಜ್ಯ ಮಟ್ಟಕ್ಕೆ ಆಯ್ಕೆ
ವಿಜಯಪುರ 26: ಜಿಲ್ಲಾ ಪಂಚಾಯತ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ನಗರದ ಪಿಡಿಜೆ ಪದವಿಪೂರ್ವ ಮಹಾವಿದ್ಯಾಲಯ (ಮಾಧ್ಯಮಿಕ ವಿಭಾಗ) ವಿದ್ಯಾರ್ಥಿನಿ ಕುಮಾರಿ ಶಿರಿನಬಾನು ಅಕ್ಕಲಕೋಟ "ಮಾಲಿನ್ಯರಹಿತ ವಾಟರ್ ರಾಕೆಟ್ ಮಾದರಿಯನ್ನು ಪ್ರದರ್ಶಿಸಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ಇದೇ ಶಾಲೆಯ ಕುಮಾರ ಸೌರಭ ಕಟ್ಟಿ ಈತನು ತಯಾರಿಸಿದ "ಸಾರಿಗೆ ಮತ್ತು ಸಂಪರ್ಕ ಮಾದರಿ ಪ್ರದರ್ಶಿಸಿ ಜಿಲ್ಲೆಗೆ ತೃತಿಯ ಸ್ಥಾನ ಪಡೆದಿದ್ದಾನೆ. ವಿಜ್ಞಾನ ಶಿಕ್ಷಕ ವಿ.ಆರ್. ಕಟ್ಟಿ ಅವರು ಈ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದ್ದರು.
ವಿದ್ಯಾರ್ಥಿಗಳ ಸಾಧನೆಗೆ ಪ್ರಾಚಾರ್ಯರು, ಉಪಪ್ರಾಚಾರ್ಯರು, ಆಡಳಿತ ಮಂಡಳಿ ಎಲ್ಲ ಸದಸ್ಯರು ಹಾಗೂ ಶಿಕ್ಷಕ ವೃಂದ ಹರ್ಷ ವ್ಯಕ್ತಪಡಿಸಿದ್ದಾರೆ.
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 