ವಿಜಯಪುರ: ಸಿಂಡಿಕೇಟ್ ಬ್ಯಾಂಕ್ ಕಳವು
ವಿಜಯಪುರ 20: ದುಷ್ಕರ್ಮಿಗಳ ಗಿಂಪೊಂದು ತಡರಾತ್ರಿ ಇಲ್ಲಿನ ಸಿಂಡಿಕೇಟ್ ಬ್ಯಾಂಕ್ನ ಗೋಡೆಯನ್ನು ಕೊರೆದು ರೂ13,460 ನಗದು ಕಳವು ಮಾಡಿದೆ
ಬ್ಯಾಂಕಿನ ಎಡ ಭಾಗದ ಗೋಡೆಯನ್ನು ತಳ ಸಮೇತ ಕೊರೆದು ಒಳ ನುಗ್ಗಿದ ಕಳ್ಳರು, ಮೊದಲು ಸೇಫ್ ಲಾಕರ್ ಕೊಠಡಿ ಪ್ರವೇಶಿಸಿದ್ದಾರೆ ಆದರೆ ಸೈರನ್ ಭೀತಿಯಿಂದ ಹಿಂದೆ ಸರಿದು ಗೋಡೆಗೆ ಕೊರೆದಿದ್ದ ಕಿಂಡಿಯಿಂದ ಪ್ರಮುಖ ದಾಖಲೆಗಳನ್ನು ಹೊರಕ್ಕೆ ಎಸೆದಿದ್ದಾರೆ ಎಂದು ತಿಳಿದು ಬಂದಿದೆ
ವಿಷಯ ತಿಳಿದ ಬ್ಯಾಂಕ್ ವ್ಯವಸ್ಥಾಪಕ ಶಿವಶಂಕರ ತಾಳಿಕೋಟ ಹಾಗೂ ಸಿಬ್ಬಂದಿ ಪೋಲೀಸರಿಗೆ ಮಾಹಿತಿ ನೀಡಿದರು
ಸಿಪಿಐ ಭೇಟಿ; ಸ್ಥಳಕ್ಕೆ ಭೇಟಿ ನೀಡಿದ ಮುದ್ದೇಬಿಹಾಳ ಪೋಲೀಸ್ ಇನ್ಸ್ಪೆಕ್ಟರ್ ಆನಂದ ವಾಘ್ಮೋರೆ, ಕಳ್ಳರು ಕೊರೆದ ಕಿಂಡಿ ಹಾಗೂ ಲಾಕರ್ ಕೊಠಡಿಯಲ್ಲಿದ್ದ ಹಣವನ್ನು ಪರಿಶೀಲಿಸಿದರು.
ಭಾರಿ ಪ್ರಮಾಣದ ಹಣ ಕಳುವಾಗಿಲ್ಲ ಆದರೆ ರೂ13,460 ನಗದು ದೋಚಿದ್ದಾರೆ ಎಂದು ಪೋಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ
ಎಎಸ್ಐ ಎಸ್.ಬಿ.ನ್ಯಾಮಣ್ಣನವರ, ಪಿ.ಎಸ್.ಪಾಟೀಲ, ಎ.ವೈ.ಸಾಲಿ, ರವಿ ಜಾಧವ್ ಹಾಗೂ ಆರ್.ಎಸ್.ಪಾಟೀಲ ಇದ್ದರು.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 