ವಿಜಯಪುರ: ರೈಲು ನಿಲ್ದಾಣದ ಎದುರು ವಿಕಲಚೇತನರ ಧರಣಿ
ಲೋಕದರ್ಶನ ವರದಿ
ವಿಜಯಪುರ 21: ಗದಗ-ಬೆಟಗೇರಿ ರೈಲ್ವೆ ಹೋರಾಟ ಸಮಿತಿ ವತಿಯಿಂದ ವಿಜಯಪುರ ರೈಲು ನಿಲ್ದಾಣ ಎದುರುಗಡೆ ಹಲವಾರು ಬೇಡಿಕೆಗಳನ್ನು ಪೂರೈಸುವಂತೆ ಒತ್ತಾಯಿಸಿ ಒಂದು ದಿನದ ಸಾಂಕೇತಿಕ ಧರಣಿಗೆ ಕರ್ನಾಟಕ ರಾಜ್ಯ ವಿಕಲಚೇತನರ ಹೋರಾಟ ಸಮಿತಿಯ ಪದಾಧಿಕಾರಿಗಳು ಬೆಂಬಲ ನೀಡಿದರು. ರೈಲು ನಿಲ್ದಾಣದಲ್ಲಿ ಮತ್ತು ರೈಲಿನಲ್ಲಿ ವಿಕಲಚೇತನರಿಗೆ ಆಗುವ ತೊಂದರೆಗಳು, ಮತ್ತು ಅನಾನುಕೂಲತೆಗಳನ್ನು ಸರಿಪಡಿಸಲು ಒತ್ತಾಯಿಸಿ ಮತ್ತು ರೈಲ್ವೆ ನಿಲ್ದಾಣದಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಒತ್ತಾಯಿಸಿ ಸಾಂಕೇತಿಕ ಧರಣಿ ನಡೆಸಿ ರೈಲ್ವೆ ನಿಲ್ದಾಣದ ಅಧೀಕ್ಷಕರ ಮೂಲಕ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿಗೆ ಮನವಿ ಸಲ್ಲಿಸಿದರು.
ಈ ಸಂಧರ್ಭದಲ್ಲಿ ಹೋರಾಟ ಸಮಿತಿಯ ಅಧ್ಯಕ್ಷರಾದ ಭೀಮನಗೌಡ.ಬಿ.ಪಾಟೀಲ(ಸಾಸನೂರ, ಪದಾಧಿಕಾರಿಗಳಾದ ಸುರೇಶ ಚವ್ಹಾಣ, ಸಂತೋಷ ಬೊಮ್ಮನಳ್ಳಿ, ಪರಶುರಾಮ ಗಾಯಕವಾಡ, ದಸ್ತಗೀರಬಾಷಾ ಉಪ್ಪಲದಿನ್ನಿ, ನಿಮಿಶ ಆಚಾರ್ಯ, ಮೈನು ಪಡೇಕನೂರ ಮತ್ತೀತರರು ಉಪಸ್ಥಿತರಿದ್ದರು.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 