ವಿಜಯಪುರ : ವಿಶ್ವ ಹೃದಯ ದಿನಾಚರಣೆ ಉಚಿತ ಹೃದಯ ತಪಾಸಣೆ ಶಿಬಿರ
ಲೋಕದರ್ಶನ ವರದಿ
ವಿಜಯಪುರ 29: ವಿಶ್ವ ಹೃದಯ ದಿನಾಚರಣೆ ಅಂಗವಾಗಿ ನಗರದ ಕಿರನ್ ಚುಳಕಿರವರ ರಾಘವೇಂದ್ರ ಕಾಡರ್ಿಯೋ ಕೇರ್ ಮೀನಾಕ್ಷಿ ಚೌಕ್ ಹತ್ತಿರ ಉಚಿತ ಹೃದಯ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಯಿತು.
ಇದೇ ಸಂದರ್ಭದಲ್ಲಿ ಡಾ.ಕಿರನ್ ಚುಳಕಿ ಮಾತನಾಡಿ ಬದಲಾಗುತ್ತಿರುವ ಜೀವನ ಶೈಲಿ ಹಾಗೂ ಆಹಾರ ಶೈಲಿ ಹೃದಯ ಸಂಬಂಧಿ ಕಾಯಿಲೆ ಹೆಚ್ಚಲು ಪ್ರಮುಖ ಕಾರಣ. ಚಟುವಟಿಕೆಯಿಲ್ಲದ ಜಡಜೀವನ ಸ್ಥೋಲಾಕಾಯ ಬೊಜ್ಜು ಅದಿಕ ಕೊಬ್ಬಿನಾಂಶ ಇರುವ ಖರೀದ ಆಹಾರ ಸೇವನೆ ಮಾನಸಿಕ ಒತ್ತಡ ಅನಿಯಮಿತ ಧೂಮಪಾನ, ತಂಬಾಕು ಸೇವನೆ ಮಧ್ಯಪಾನದಂಥ ದುಶ್ಚಟಗಳ, ಅಧಿಕ ರಕ್ತದೊತ್ತಡ, ಮಧುಮೇಹ, ನಿದ್ರೆ ಇಲ್ಲದ ರಾತ್ರಿ ಹೃದಯ ಸಮಸ್ಯೆ ಉಲ್ಭಣಿಸಲು ಮೂಲ ಕಾರಣವಾಗಿವೆ. ವ್ಯಕ್ತಿಗತವಾಗಿಯೇ ಹೃದಯದ ಸ್ವಾಸ್ಥ್ಯದ ಬಗ್ಗೆ ಜಾಗೃತಿ ಮೂಡಿಸಿದರೆ ಪ್ರಪಂಚದಲ್ಲಿ ಹೃದಯ ರೋಗಗಳಿಗೆ ತುತ್ತಾಗುವವರ ಸಂಖ್ಯೆ ಕಡಿಮೆ ಮಾಡುವುದು ಸಾಧ್ಯವಿದೆ ಎಂದು ಹೇಳಿದರು.
ಶಿಬಿರದಲ್ಲಿ 200ಕ್ಕೂ ಹೆಚ್ಚು ಬಿಪಿ, ರಕ್ತ ಸಕ್ಕರೆ, ಇಸಿಜಿ, ಕೊಲೇಸ್ಟ್ರಾಲ್, 2ಡಿ ಎಕೋ ಮುಂತಾದ ಹೃದಯಕ್ಕೆ ಸಂಬಂಧ ಪಟ್ಟ ತಪಾಸಣೆ ಮಾಡಲಾಯಿತು.
ಶೇಖ, ಮಾನಿಕಚಂದ್, ಸುಜಿತ್ ನಾಗರಾಜ, ವಿರೇಶ, ಗಿರೀಶ, ಮಂಜುನಾಥ, ರಮೇಶ, ಕಾಮೇಶ, ವೇದಾಂತ ಲ್ಯಾಬ್ ಮಲ್ಲು ಕಲಾದಗಿ, ವಿಜಯ ಜೋಶಿ, ರಾಕೇಶ ಕುಲಕಣರ್ಿ, ವಿನಾಯಕ ದಹಿಂಡೆ ಮುಂತಾದವರು ಉಪಸ್ಥಿತರಿದ್ದರು.
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 