ಇಂದಿನಿಂದ ವಿಜಯಪುರ- ಬಬಲೇಶ್ವರ ಸಾರಿಗೆ ಬಸ್ಸು ಸೇವೆ ಪ್ರಾರಂಭ
Vijayapura-Babaleshwar transport bus service starts from today
ವಿಜಯಪುರ 25: ಮಂಗಳವಾರದಿಂದ ವಿಜಯಪುರ- ಬಬಲೇಶ್ವರ ಮತ್ತು ಬಬಲೇಶ್ವರ- ವಿಜಯಪುರ ಮಧ್ಯೆ ಸಾಮಾನ್ಯ ಸಾರಿಗೆ ಎರಡು ಬಸ್ಸುಗಳ ಸೇವೆ ಪ್ರಾರಂಭವಾಗಲಿದೆ .ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರ ಸೂಚನೆ ಮೇರೆಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಪ್ರತಿದಿನ ಸಾರಿಗೆ ಎರಡು ಬಸ್ಸುಗಳನ್ನು ಈ ಮಾರ್ಗದಲ್ಲಿ ಓಡಿಸಲಿದೆ.
ಒಂದು ಬಸ್ಸು ವಿಜಯಪುರ- ಖತಿಜಾಪುರ- ಸಾರವಾಡ ಮಾರ್ಗವಾಗಿ ಬಬಲೇಶ್ವರಕ್ಕೆ ಸಂಚರಿಸಿದರೆ ಮತ್ತೋಂದು ಬಸ್ಸು ಬಬಲೇಶ್ವರ- ಸಾರವಾಡ- ಖತಿಜಾಪುರ ಮಾರ್ಗವಾಗಿ ವಿಜಯಪುರಕ್ಕೆ ಸಂಚರಿಸಲಿದೆ. ಪ್ರತಿದಿನ ಎರಡೂ ಬಸ್ಸುಗಳು ತಲಾ ಎಂಟು ಬಾರಿ ಈ ಮಾರ್ಗದಲ್ಲಿ ಸಂಚಾರ ನಡೆಸಲಿವೆ.ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ತಮ್ಮ ಶಾಲೆ, ಕಾಲೇಜುಗಳು ಮತ್ತು ದೈನದಿಂದ ಚಟುವಟಿಕೆಗಳ ಅನುಕೂಲಕ್ಕಾಗಿ ಸಾರಿಗೆ ಇಲಾಖೆಯ ಬಸ್ಸುಗಳನ್ನು ನಿಲುಗಡೆ ಮಾಡಬೇಕು ಎಂದು ಸಚಿವರಿಗೆ ಮನವಿ ಮಾಡಿದ್ದರು.
ಅಲ್ಲದೇ, ಈ ಮಾರ್ಗವಾಗಿ ಸಂಚರಿಸುವ ಇನ್ನುಳಿದ ಬಸ್ಸುಗಳನ್ನು ಸಾರವಾಡ ಗ್ರಾಮದಲ್ಲಿ ನಿಲುಗಡೆ ಮಾಡುವ ನಿಟ್ಟಿನಲ್ಲಿಯೂ ಸೂಕ್ತ ಕ್ರಮ ಕೈಗೊಳ್ಳವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 