ಅ.16ರಂದು ವಿಜಯಪುರ ಬಂದ್, ಬೃಹತ್ ಪ್ರತಿಭಟನಾ ಮೆರವಣಿಗೆ
Vijayapura bandh, massive protest march on October 16
ಲೋಕದರ್ಶನ ವರದಿ
ಅ.16ರಂದು ವಿಜಯಪುರ ಬಂದ್, ಬೃಹತ್ ಪ್ರತಿಭಟನಾ ಮೆರವಣಿಗೆ
ಸಿಂದಗಿ 13: ಇದು ವ್ಯಕ್ತಿಯ ಮೇಲೆ ಆದ ಪ್ರಹಾರ ಎನ್ನುವುದಕ್ಕಿಂತ ಅಂಬೇಡ್ಕರ್ ಅವರ ಮೇಲಾದ ನೇರ ಪ್ರಹಾರ. ಘಟನೆ ನಡೆದು 9ಗಂಟೆ ನಂತರ ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದನ್ನು ಹೊರತುಪಡಿಸಿ ಯಾವೊಬ್ಬ ಸಂಸದರು, ರಾಜಕೀಯ ನಾಯಕರು ಖಂಡಿಸದೇ ಇರುವುದು ದುರದೃಷ್ಟಕರ ಎಂದು ಮಾಜಿ ಪುರಸಭೆ ಸದಸ್ಯ ರಾಜಶೇಖರ ಕೂಚಬಾಳ ವಿಷಾದ ವ್ಯಕ್ತಪಡಿಸಿದರು.
ಸಿಂದಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಭಾರತದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆದ ಘಟನೆಯನ್ನು ಖಂಡಿಸಿ ಅ.16ರಂದು ವಿಜಯಪುರ ಬಂದ್ ಹಾಗೂ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ವಿಜಯಪುರ ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದು, ಎಲ್ಲ ಸಂಘಟನೆಗಳು ಸಹಕಾರ ನೀಡಬೇಕು. ಸಂವಿಧಾನದ ಅತ್ಯಂತ ಶ್ರೇಷ್ಠ ಅಂಗಗಳಲ್ಲಿ ನ್ಯಾಯಾಂಗವು ಒಂದು. ನ್ಯಾಯಾಲಯವನ್ನು ದೇವಾಲಯವೆಂದು, ನ್ಯಾಯಾಧೀಶರನ್ನು ದೇವರೆಂದು ಪೂಜಿಸಲಾಗುತ್ತದೆ. ಇಂತಹ ಪವಿತ್ರ ಸ್ಥಾನ ಮತ್ತು ವ್ಯಕ್ತಿಯ ಮೇಲೆ ಅವಮಾನಕಾರಿಯಾಗಿ ಶೂ ಎಸೆದದ್ದು ಖಂಡನಾರ್ಹ. ಅದು ಕೇವಲ ವ್ಯಕ್ತಿಗತ ಅವಮಾನವಲ್ಲದೇ ಸಂವಿಧಾನದ ಮೇಲೆ ಮಾಡಿದ ಪ್ರಹಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದಲಿತ ಮುಖಂಡರಾದ ರವಿ ಹೋಳಿ, ಧರ್ಮಣ್ಣ ಯಂಟಮಾನ, ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತರ ಘಟಕದ ತಾಲೂಕಾಧ್ಯಕ್ಷ ಸಲೀಂ ಮರ್ತೂರ ಮಾತನಾಡಿ, ಭಾರತ ದೇಶದಲ್ಲಿ ನ್ಯಾಯಾಂಗ ವ್ಯವಸ್ಥೆ ಪ್ರಭಲವಾಗಿದ್ದರೂ ಸಹ ಇಂತಹ ವ್ಯವಸ್ಥೆಯ ವಿರುದ್ಧ ಜ್ಯಾತ್ಯಾತೀತ, ಪಕ್ಷಾತೀತ ಪ್ರತಿಭಟನೆ ನಡೆಯದೇ ಇರುವುದು ವಿಷಾದನೀಯ. ಇದಕ್ಕೆ ಎಲ್ಲ ಪ್ರಗತಿಪರ ಸಂಘಟನೆಗಳು ಒಂದೇ ವೇದಿಕೆಯಲ್ಲಿ ಒಂದುಗೂಡಿ ಇಂತಹ ಘಟನೆಗಳು ಮತ್ತೇ ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 