ಬಳ್ಳಾರಿ ಚಲೋ ಪಾದಯಾತ್ರೆ ಸಮಾರೋಪಕ್ಕೆ ಬೃಹತ್ ಜನಸಂಖ್ಯೆ ಸೇರಿಸಿ: ವಿಜಯೇಂದ್ರ ಮನವಿ
Vijayendra appeals for a massive turnout at the 'Ballari Chalo' padayatra's concluding event
ಬಳ್ಳಾರಿ, ಸೆ.10 (ಕರ್ನಾಟಕ ವಾರ್ತೆ): ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ನಡೆಯುತ್ತಿರುವ ಬೃಹತ್ ಪಾದಯಾತ್ರೆಯ ಸಮಾರೋಪ ಸಮಾರಂಭ ಸೆ.11ರಂದು ಸಂಜೆ 4 ಗಂಟೆಗೆ ಬಳ್ಳಾರಿಯ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ನಡೆಯಲಿದೆ.
ರಾಜ್ಯದ ಮೂಲೆ ಮೂಲೆಗಳಿಂದ ಸುಮಾರು ಒಂದು ಲಕ್ಷಕ್ಕೂ ಅಧಿಕ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಸಮಾರೋಪ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಪಕ್ಷದ ಎಲ್ಲ ಕಾರ್ಯಕರ್ತರು, ತಾಯಂದಿರು, ಅಣ್ಣ-ತಮ್ಮಂದಿರು ಹಾಗೂ ಅಕ್ಕ-ತಂಗಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟಕ್ಕೆ ಬೆಂಬಲ ನೀಡಬೇಕು ಎಂದು ವಿಜಯೇಂದ್ರ ಮನವಿ ಮಾಡಿದರು.
ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳು, ಭ್ರಷ್ಟಾಚಾರ ಹಾಗೂ ದಲಿತ, ಬಡವರು, ರೈತರು, ಮಹಿಳೆಯರು ಮತ್ತು ಯುವಜನ ವಿರೋಧಿ ಧೋರಣೆಗಳನ್ನು ಖಂಡಿಸಿ ಬಿಜೆಪಿ ಈ ಬೃಹತ್ ಪಾದಯಾತ್ರೆ ಹಮ್ಮಿಕೊಂಡಿದೆ. ರಾಜ್ಯ ಸರ್ಕಾರದ ಭ್ರಷ್ಟಾಚಾರವನ್ನು ಬಯಲಿಗೆಳೆಯುವ ಉದ್ದೇಶದಿಂದ ನಡೆದ ಪಾದಯಾತ್ರೆ ಸೆ.11ರಂದು ಸಮಾರೋಪಗೊಳ್ಳಲಿದೆ ಎಂದು ಅವರು ತಿಳಿಸಿದರು.
ಸಂಜೆ 4 ಗಂಟೆಗೆ ಮುನ್ಸಿಪಲ್ ಕಾಲೇಜು ಮೈದಾನಕ್ಕೆ ಕಾರ್ಯಕರ್ತರು ಆಗಮಿಸಬೇಕು. 4.30ಕ್ಕೆ ಬೃಹತ್ ಬಹಿರಂಗ ಸಭೆ ಆರಂಭವಾಗಲಿದ್ದು, ಬಳಿಕ ಪಾದಯಾತ್ರೆಯ ಸಮಾರೋಪ ಕಾರ್ಯಕ್ರಮ ನಡೆಯಲಿದೆ ಎಂದು ವಿಜಯೇಂದ್ರ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 