ಕಿತ್ತುಹೋದ ರಸ್ತೆ ಡಾಂಬರೀಕರಣ ಮಾಡಲು ಗ್ರಾಮಸ್ಥರು ಒತ್ತಾಯ
Villagers demand asphalting of eroded road
ಲಕ್ಷ್ಮೇಶ್ವರ 28 : ತಾಲೂಕಿನಲ್ಲಿ ಬಹಳಷ್ಟು ರಸ್ತೆಗಳ ಡಾಂಬರೀಕರಣ ಕಿತ್ತುಕೊಂಡು ಹೋಗಿ ರಸ್ತೆ ತುಂಬೆಲ್ಲ ಗುಂಡಿಗಳು ಬಿದ್ದು ರಸ್ತೆ ಸಂಚಾರ ಮಾಡದಷ್ಟು ಹದಗೆಟ್ಟಿ ಹೋಗಿವೆ ಹದಗೆಟ್ಟು ಹೋದ ರಸ್ತೆಯಲ್ಲಿ ವಾಹನ ಸವಾರರು ಸಂಚಾರ ಮಾಡುವಾಗ ಗುಂಡಿಯಲ್ಲಿ ಬಿದ್ದು ಬೈಕ್ ಸವಾರರು ಕೈಕಾಲು ಮುರಿದುಕೊಂಡ ಘಟನೆಗಳು ಸಹ ನಡೆದಿವೆ ಅದರಂತೆ ತಾಲೂಕಿನ ಅಮರಾಪುರ ಗ್ರಾಮದಿಂದ ಹುಲ್ಲೂರು ನೆಲೆಗಲ್ ಸಂಪರ್ಕಿಸುವ ರಸ್ತೆ ಹಾಗೂ ಅಮರಾಪುರ ಸೂಗಿಹಾಳ ಸಂಪರ್ಕಿಸುವ ರಸ್ತೆಯ ಡಾಂಬರೀಕರಣ ಕಿತ್ತುಕೊಂಡು ಹೋಗಿ ರಸ್ತೆ ತುಂಬೆಲ್ಲ ಗುಂಡಿಗಳು ಬಿದ್ದು ವಾಹನ ಸವಾರರು ರೈತರು ತಮ್ಮ ವಾಹನಗಳನ್ನು ಚಲಾಯಿಸಿಕೊಂಡು ಹೋಗದಷ್ಟು ರಸ್ತೆ ಹದಗೆಟ್ಟಿದ್ದು ರಸ್ತೆಯ ಡಾಂಬರೀಕರಣ ಸಂಪೂರ್ಣವಾಗಿ ಕಿತ್ತುಕೊಂಡು ಹೋಗಿ ರಸ್ತೆ ಅನ್ನೋದು ಅಸ್ತಿ ಪಂಜರದಂತಾಗಿದೆ ಈ ರಸ್ತೆ ಮುಖಾಂತರ ವಾಹನ ಚಲಾಯಿಸಿಕೊಂಡು ಹೋಗುವ ವಾಹನ ಸವಾರರು ನರಕ ಯಾತನೆ ಅನುಭವಿಸುತ್ತಿದ್ದಾರೆ ಇನ್ನಾದರೂ ಸಂಬಂಧಿಸಿದ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕಿತ್ತುಹೋದ ರಸ್ತೆಗೆ ಮರು ಡಾಂಬರೀಕರಣವನ್ನು ಮಾಡಿ ಈ ಭಾಗದಲ್ಲಿ ಸಂಚರಿಸುವ ವಾಹನ ಸವಾರರಿಗೆ ಅನುಕೂಲ ಕಲ್ಪಿಸಿ ಕೊಡಬೇಕೆಂದು ಅಮರಾಪುರ ಹುಲ್ಲೂರು ಗ್ರಾಮದ ಮುಖಂಡರಾದ ಕುಮಾರ ಮಾಗಡಿ ನಿಂಗಪ್ಪ ರಗಟಿ ರಾಜು ಕೆರೆಕೊಪ್ಪದ ಪರಮೇಶಗೌಡ ಪಾಟೀಲ ರಮೇಶ ಕೆರೆ ಕೊಪ್ಪದ ಬಸನಗೌಡ ಪಾಟೀಲ ಮಾದೇವಪ್ಪ ಅಕ್ಕಿ ಗುರುನಾಥ ದ್ಯಾವನೂರ ಎಂ ಎಂ ಗಾಡಗೋಳಿ ಮುತ್ತಪ್ಪ ಕಡಕೋಳ ರಾಜು ನದಾಫ ಸೇರಿದಂತೆ ಇನ್ನು ಅನೇಕ ಮುಖಂಡರು ಒತ್ತಾಯಿಸಿದ್ದಾರೆ
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 