ನೂತನ ಬಸ್ಗೆ ಗ್ರಾಮಸ್ಥರಿಂದ ಸ್ವಾಗತ
Villagers welcome new bus
ದೇವರಹಿಪ್ಪರಗಿ 28: ಬಸವನ ಬಾಗೇವಾಡಿಯಿಂದ ಕೊಂಡಗೂಳಿ ಮಾರ್ಗವಾಗಿ ಸಿಂದಗಿ ಪಟ್ಟಣಕ್ಕೆ ಸಂಚರಿಸುವ ನೂತನ ಬಸ್ಗೆ ಗ್ರಾಮಸ್ಥರು ಹಾರ ಹಾಕಿ, ಪೂಜೆ ಸಲ್ಲಿಸುವ ಮೂಲಕ ಸಂಭ್ರಮದಿಂದ ಸ್ವಾಗತ ಕೋರಿದರು.
ಬಹು ದಿನಗಳ ಬೇಡಿಕೆಗೆ ಸ್ಪಂದಿಸಿದ ಸಾರಿಗೆ ಇಲಾಖೆ, ಬಸವನ ಬಾಗೆವಾಡಿ - ಹೂವಿನ ಹಿಪ್ಪರಗಿ, ಕುದುರಿ ಸಾಲವಾಡಗಿ, ಯಾಳವಾರ, ಕೊಂಡಗೂಳಿ, ಕೋರವಾರ ಹಾಗೂ ಕೊಕಟನೂರ ಮಾರ್ಗವಾಗಿ ಸಿಂದಗಿ ಪಟ್ಟಣಕ್ಕೆ ನೂತನ ಬಸ್ ಸಂಚಾರ ಆರಂಭಿಸಿದೆ.
ಈ ಸೇವೆ ಆರಂಭಿಸಲು ಸಹಕರಿಸಿದ ಶಾಸಕ ರಾಜುಗೌಡ ಪಾಟೀಲ ಕುಡರಿಸಲವಾಡಗಿ ಹಾಗೂ ವಿಜಯಪುರ ವಿಭಾಗದ ಸಾರಿಗೆ ಅಧಿಕಾರಿಗಳಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದರು. ನೂತನ ಬಸ್ ಸೇವೆಯಿಂದ ವಿದ್ಯಾರ್ಥಿಗಳು, ರೈತರು, ವ್ಯಾಪಾರಿಗಳು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದು ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಶಿವು ಕೊಳ್ಳಾರಿ, ಬಾಬು ನದಾಫ್, ಉಮೇಶ ಹಣ್ಣಿ, ಕಾಸಿಲಿಂಗ ಸಿಂದಗೇರಿ, ಅಕ್ಷಯ ಗೊಬ್ಬರ, ಕಲ್ಲು ಅವರಾದಿ, ಶಿವಾನಂದ ಗೊಬ್ಬರ, ಮಹಿಬೂಬ ಖಾಜಿ, ಮುನೀರ್ ನದಾಫ್, ಬಸವಲಿಂಗಯ್ಯ ಹಿರೇಮಠ, ಬಸವರಾಜ ಕುಲಕರ್ಣಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 