ಕರ್ನಾಟಕ ವಿಶ್ವವಿದ್ಯಾಲಯದಿಂದ ವೀರೇಶ ಜಿ. ಹಿರೇಮಠ ಅವರಿಗೆ ಪಿಎಚ್.ಡಿ ಪ್ರಧಾನ
Viresh G. Hiremath awarded PhD from Karnataka University
ಲೋಕದರ್ಶನ ವರದಿ
ಧಾರವಾಡ 08: ಕರ್ನಾಟಕ ವಿಶ್ವವಿದ್ಯಾಲಯ ವಿಜ್ಞಾನ ಮತ್ತು ತಂತ್ರಜ್ಞಾನ ನಿಖಾಯದ ಭೌತಶಾಸ್ತ್ರ ಅಧ್ಯಯನ ವಿಭಾಗದಲ್ಲಿ ಸಂಶೋಧನಾ ವಿದ್ಯಾರ್ಥಿಯಾಗಿದ್ದ ವೀರೇಶ ಗುರುಸಿದ್ದಯ್ಯ ಹಿರೇಮಠ ಅವರು ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಮಂಡಿಸಿದ್ದ, ಸಿಂಥೆಸಿಸ್ ಆಂಡ್ ಕ್ಯಾರಕ್ಷರೆಜೇಶನ್ ಆಫ್ ಸಮ್ ರೇರ್ ಅರ್ಧಡೊಪ್ಸ್ ಫೆರೆಟ್ ನ್ಯಾನೊಪಾರ್ಟಿಕಲ್ಸ್ ಫಾರ್ ಸೆನ್ನರ್ ಅಪ್ಲಿಕೇಶನ್ಸ್ ವಿಷಯ ಕುರಿತು ಸಲ್ಲಿಸಿದ್ದ ಸಂಶೋಧನಾ ಮಹಾಪ್ರಬಂಧಕ್ಕೆ ಏಪ್ರಿಲ್ 2, 2026 ರಂದು ಕರ್ನಾಟಕ ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿ ಪ್ರಧಾನ ಮಾಡಿದೆ.
ಕರ್ನಾಟಕ ವಿಶ್ವವಿದ್ಯಾಲಯ ಕರ್ನಾಟಕ ವಿಜ್ಞಾನ ಮಹಾವಿದ್ಯಾಲಯ ವಿಭಾಗದ ಭೌತಶಾಸ್ತ್ರ ಪ್ರಾಧ್ಯಾಪ ಡಾ. ಜಿ.ಎಚ್. ಮಳಿಮಠ ಅವರು ಮಾರ್ಗದರ್ಶನ ಮಾಡಿದ್ದಾರೆ. ಪ್ರಸ್ತುತ ಡಾ. ವಿರೇಶ ಗುರುಸಿದ್ದಯ್ಯ ಹಿರೇಮಠ ಅವರು ಕೆಎಸಂಸ್ಥೆಯ ಹುಬ್ಬಳ್ಳಿಯ ಪಿ.ಸಿ.ಜಾಬಿನ ವಿಜ್ಞಾನ ಮಹಾವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ ಸಾಧನೆಗೆ ಕೆಎಸಂಸ್ಥೆಯ ಚೇರ್ಮನ್ ಅಮೀತ ಕೋರೆ, ಕಾಲೇಜು ಪ್ರಾಚಾರ್ಯರಾದ ಡಾ.ಸಂದ್ಯಾ ಕುಲಕರ್ಣಿ, ಬಸಯ್ಯ ಬಳಗಾನೂರಮಠ ಸೇರಿದಂತೆ ಕಾಲೇಜು ಪ್ರಾಧ್ಯಾಪಕರು, ಸಿಬ್ಬಂದಿ, ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 