ನಾಯಿಗೆ ಗೌರವ ಡಾಕ್ಟರೇಟ್ ನೀಡಿದ ವರ್ಜೀನಿಯಾ ವಿಶ್ವ ವಿದ್ಯಾಲಯ...!
ವರ್ಜೀನಿಯಾ, ಮೇ ೧೯, ವರ್ಜೀನಿಯಾ ಟೆಕ್ ವಿಶ್ವವಿದ್ಯಾಲಯ ತನ್ನ ಸಿಬ್ಬಂದಿಯ ಪೈಕಿ ಒಬ್ಬರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಆದರೆ. ಈ ಸಿಬ್ಬಂದಿ ಯಾರೆಂದು ...? ಗೊತ್ತಾದರೆ ನಿಮಗೆ ಅಚ್ಚರಿಯಾಗಲಿದೆ. ಇದರ ಹೆಸರು ಮೂಸ್ ಡೇವಿಸ್. ಈ ಸಿಬ್ಬಂದಿ ಒಂದು ಶ್ವಾನ...! ಕೊರೊನಾ ಸಂದರ್ಭದಲ್ಲಿ, ೨೦೨೦ ರಲ್ಲಿ ಆನ್ಲೈನ್ನಲ್ಲಿ ಪದವಿ ಪೂರ್ಣಗೊಳಿಸಿದವರಿಗೆ ಪದವಿ ಪ್ರದಾನ ಸಮಾರಂಭ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಎಂಟುವರ್ಷದ ಮೂಸ್ಗೆ ಪಶುವೈದ್ಯಕೀಯ ಔಷಧದಲ್ಲಿ ಗೌರವ ಡಾಕ್ಟರೇಟ್ ನೀಡಲಾಯಿತು. ಈ ವಿಷಯವನ್ನು ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಹೇಳಿಕೆಯಲ್ಲಿ ತಿಳಿಸಿದೆ.
ಡಾ. ಮೂಸ್ ಅನಾರೋಗ್ಯದಿಂದ ಬಳಲುತ್ತಿದ್ದರೂ, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗೆ ಸಹಾಯ ಮಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತಿದೆ. ಹಲವು ಕಾರ್ಯಕ್ರಮಗಳಲ್ಲಿ ತನ್ನ ಸೇವೆ ಸಲ್ಲಿಸಿದ್ದಕ್ಕಾಗಿ ವಿಶ್ವವಿದ್ಯಾಲಯ ಮೂಸ್ ಸೇವೆ ಪರಿಗಣಿಸಿ ಡಾಕ್ಟರೇಟ್ ನೀಡಿದೆ. ಲ್ಯಾಬ್ರಡಾರ್ ರಿಟ್ರೈವರ್ ಶ್ವಾನ ೨೦೧೪ ರಿಂದ ವಿಶ್ವವಿದ್ಯಾಲಯದಲ್ಲಿದ್ದು, ಕುಕ್ ಕೌನ್ಸೆಲಿಂಗ್ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುವ ನಾಲ್ಕು ನಾಯಿಗಳಲ್ಲಿ ಇದು ಸಹ ಒಂದಾಗಿದೆ.
ಮೂಸ್ ಅನಾರೋಗ್ಯದ ಹೊರತಾಗಿಯೂ ವಿಶ್ವವಿದ್ಯಾಲಯದ ಆವರಣದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ. ಮಾನಸಿಕ ಸಮಸ್ಯೆ ಎದುರಿಸುತ್ತಿರುವ ವಿದ್ಯಾರ್ಥಿಗಳನ್ನು ಉಲ್ಲಾಸಿತರಾಗಿಸುತ್ತದೆ . ಕ್ಯಾಂಪಸ್ನಲ್ಲಿರುವ ಎಲ್ಲ ವಿದ್ಯಾರ್ಥಿಗಳು ಮೂಸ್ನನ್ನು ಇಷ್ಟಪಡುತ್ತಾರೆ ಎಂದು ವಿಶ್ವವಿದ್ಯಾಲಯದ ಅನಿಮಲ್ ಅಸಿಸ್ಟೆಡ್ ಥೆರಪಿ ಕಾರ್ಯಕ್ರಮದ ಸಲಹೆಗಾರ ಡೇವಿಸ್ ಹೇಳಿದ್ದಾರೆ. ಡಾ. ಮೂಸ್ಗೆ ಇತ್ತೀಚೆಗೆ ಪ್ರಾಸ್ಟೇಟ್ ಕ್ಯಾನ್ಸರ್ ಇರುವುದು ಪತ್ತೆಯಾಗಿದ್ದು, ತೀವ್ರ ಅನಾರೋಗ್ಯದ ನಡುವೆಯೂ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗೆ ಸಹಾಯ ಮಾಡುತ್ತಿದೆ. ಚಿಕಿತ್ಸೆಯ ಭಾಗವಾಗಿ, ಮೂಸ್ ವಿಕಿರಣ ಮತ್ತು ಕೀಮೋಥೆರಪಿಗೆ ಒಳಗಾಗುತ್ತಿದೆ. ಆದರೂ, ಸದಾ ಉತ್ಸಾಹದಿಂದ ಆರೋಗ್ಯವಂತ ಪ್ರಾಣಿಯಂತೆ ಕಾಣಿಸುತ್ತದೆ ಅವರು ಹೇಳುತ್ತಾರೆ. ವರ್ಜೀನಿಯಾ ಟೆಕ್ ವಿಶ್ವವಿದ್ಯಾಲಯದಲ್ಲಿ ಆರು ವರ್ಷಗಳಲ್ಲಿ ಮೂಸ್ ೭೫೦೦ ಕ್ಕೂ ಹೆಚ್ಚು ಕೌನ್ಸಿಲಿಂಗ್ ಸೆಷನ್ ಮತ್ತು ೫೦೦ ಕ್ಕೂ ಟ್ರೀಚ್ ಈವೆಂಟ್ ಗಳಿಗೆ ಸಹಾಯ ಮಾಡಿದೆ. ಬಿಡುವಿನ ವೇಳೆಯಲ್ಲಿ, ಈಜು, ಟಗ್-ಆಫ್-ವಾರ್ ಕ್ರೀಡೆಗಳಲ್ಲಿ ಪಾಲ್ಗೊಳ್ಳುತ್ತದೆ.
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ 