ವಿಶ್ವೇಶ್ವರಯ್ಯ ಜನ್ಮ ದಿನಾಚರಣೆ: ಪೂರ್ವ ಭಾವಿ ಸಭೆ
Vishvesvarayya's Birth Anniversary: Pre-Fall Meeting
ಬ್ಯಾಡಗಿ 26 : ಸೆಪ್ಟೆಂಬರ್ 15 ರಂದು ನಡೆವ ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯನವರ ಜನ್ಮ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲು ತಾಲೂಕಾ ಗುತ್ತಿಗೆದಾರರ ಸಂಘದ ಸಭೆಯಲ್ಲಿ ನಿರ್ಧರಿಸಲಾಯಿತು.ಸೋಮವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಗುತ್ತಿಗೆದಾರರ ತಾಲೂಕಾ ಸಂಘದ ಅಧ್ಯಕ್ಷ ವೈ.ಎನ್. ಕರೆಗೌಡ್ರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅಂದು ನಡೆವ ಜಯಂತಿ ಕಾರ್ಯಕ್ರಮದ ಉದ್ಘಾಟನೆಯನ್ನು ತಾಲೂಕಿನ ಶಾಸಕ ಬಸವರಾಜ ಶಿವಣ್ಣನವರ ಅವರನ್ನು ಬರುವಂತೆ ಆವ್ಹಾನಿಸಲು ಸಭೆಯಲ್ಲಿ ಚರ್ಚಿಸಿತಲ್ಲದೇ ಸಂಘದ ಹತ್ತು ಹಲವಾರು ಸಮಸ್ಯೆಗಳು ಹಾಗೂ ಸಂಘದ ಸಂಘಟನೆ ಬಗ್ಗೆ ದೀರ್ಘವಾದ ಚರ್ಚೆಗಳು ನಡೆದವು.
ಸಭೆಯಲ್ಲಿ ತಾಲೂಕಾ ಗುತ್ತಿಗೆದಾರರ ಸಂಘದ ಕಾರ್ಯದರ್ಶಿ ಶಿವಪುತ್ರ್ಪ ಅಗಡಿ, ಹಿರಿಯ ಗುತ್ತಿಗೆದಾರರಾದ ರಮೇಶ ಸುತ್ತಕೋಟಿ, ತಿಮ್ಮಣ್ಣ ವಡ್ಡರ, ಶ್ರೀಕಾಂತ ಉಜನಿ, ಸುರೇಶ ಪೂಜಾರ, ಶಂಭನಗೌಡಪಾಟೀಲ, ರಮೇಶ ಓಲೇಕಾರ, ಬಸಿರ್ ಅಹ್ಮದ್ ತಳಗೇರಿ, ಆನಂದ ಬಂಡಿವಡ್ಡರ, ಕೃಷ್ಣಪ್ಪ ವಡ್ಡರ, ಮಾಲತೇಶ ಪಾತ್ರೋಟಿ, ಮಾಲತೇಶ ಮಳವಳ್ಳಿ,ಗೌತಮ್ ಮಾಳಗಿ, ವಿಜಯ್ ಸಂಕಣ್ಣವರ್ರಜ್ವಲ್ ಸೇರಿದಂತೆ ಇತರರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 