ವಿಶ್ವಕರ್ಮ ಜಯಂತಿ ಆಚರಣೆ
Vishwakarma Jayanti celebration: Talikoti News
ತಾಳಿಕೋಟಿ 18: ತಹಸಿಲ್ದಾರ್ ಕಾರ್ಯಾಲಯದ ಸಭಾಂಗಣದಲ್ಲಿ ತಾಲೂಕ ಆಡಳಿತದ ವತಿಯಿಂದ ವಿಶ್ವಕರ್ಮ ಜಯಂತಿಯನ್ನು ವಿಶ್ವಕರ್ಮರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರೊಂದಿಗೆ ಬುಧವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಶಿಕ್ಷಕ ಗುಂಡೂರಾವ್ ಧನಪಾಲ ಅವರು ಮಾತನಾಡಿ ಕಠಿಣ ಪರಿಶ್ರಮ ಮತ್ತು ಶ್ರದ್ಧೆಯಿಂದ ಕೆಲಸ ನಿರ್ವಹಿಸಿ ವಿಶೇಷ ಕಲೆಯ ಮೂಲಕ ಸಮಾಜಕ್ಕೆ ಅಪಾರ ಕೊಡುಗೆ ನೀಡಿದವರು ವಿಶ್ವಕರ್ಮ ಸಮಾಜ ದವರಾಗಿದ್ದಾರೆ. ವಿಶ್ವಕರ್ಮ ಅವರು ಜಗತ್ತಿನ ಸೃಷ್ಟಿಗೆ ಕಾರಣರಾದವರು ಇಂತಹ ಮಹಾನ್ ದಾರ್ಶನಿಕರ ಜಯಂತಿ ಆಚರಿಸುವುದರ ಜೊತೆಗೆ ಅವರ ಬದುಕಿನ ಆದರ್ಶಗಳನ್ನು ಮೈಗೂಡಿಸಿಕೊಳ್ಳುವ ಅಗತ್ಯವಿದೆ ಎಂದರು. ತಹಸೀಲ್ದಾರ ಡಾ.ವಿನಯಾ ಹೂಗಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಶಿರಸ್ತೆದಾರ ಜೆ.ಆರ್.ಜೈನಾಪೂರ, ಪುರಸಭೆ ಕಂದಾಯ ಅಧಿಕಾರಿ ಅಮರಣ್ಣವರ, ಸಮಾಜದ ಗಣ್ಯರಾದ ಆರ್ ಆರ್ ಬಡಿಗೇರ, ಮನೋಹರ ಪತ್ತಾರ, ಪ್ರಭಾಕರ ಬಡಿಗೇರ,ಈರಣ್ಣ ವಿಶ್ವಕರ್ಮ,ನಾಗಣ್ಣ ಹಂಚಲಿ, ಅಶೋಕ ಪತ್ತಾರ, ಪ್ರಭು ವಿಶ್ವಕರ್ಮ, ಮೌನೇಶ ಗುತ್ಯಾಳ, ಪ್ರಕಾಶ ಸಾಸನೂರ, ದಶರಥ ಬಂಡೇಕಾರ, ವಿವೇಕ ಪತ್ತಾರ, ಸುರೇಶ ಸೋಮನಾಳ, ಸೋಮು ಪತ್ತಾರ, ಲಕ್ಷ್ಮಿಕಾಂತ ಬಡಿಗೇರ ಹಾಗೂ ಸಿಬ್ಬಂದಿಗಳು ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 