ಕೊಪ್ಪಳದಲ್ಲಿ ವಿಶ್ವಕರ್ಮ ಮಾಜಿ ನಿಗಮ ಮಂಡಳಿ ಸದಸ್ಯ ಪ್ರಭಾಕರ್ ಬಡಿಗೇರ್ ಒತ್ತಾಯ
ಕೊಪ್ಪಳ 30: ಗುತ್ತಿಗೆದಾರ, ಭಾಲ್ಕಿ ತಾಲ್ಲೂಕಿನ ಕಟ್ಟಿತೂಗಾಂವ್ ಗ್ರಾಮದ ನಿವಾಸಿ ಸಿವಿಲ್ ಎಂಜಿನಿಯರ್ ಸಚಿನ್ ಮಾನಪ್ಪ ಪಾಂಚಾಳ್ (26) ನಗರದ ರೈಲು ಮಾರ್ಗದ ಹಳಿಯಲ್ಲಿ ಗುರುವಾರ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಪ್ರಕರಣ ಸಿಬಿಐಗೆ ಕೊಡಬೇಕು ಎಂದು ಪ್ರಭಾಕರ್ ಬಡಿಗೇರ್ ಸರ್ಕಾರವನ್ನ ಒತ್ತಾಯಿಸಿದ್ದಾರೆ. ರವಿವಾರ ಕೊಪ್ಪಳದಲ್ಲಿ ವಿಶ್ವಕರ್ಮ ಅಭಿವೃದ್ಧಿ ನಿಗಮದ ಅಧಿಕಾರೇತರ ಮಾಜಿ ಸದಸ್ಯರಾದ ಪ್ರಭಾಕರ್ ಬಡಿಗೇರ್ ರವರು ಮಾತನಾಡಿ ಮೃತ ಗುತ್ತಿಗೆದಾರ ಸಚಿನ್ ಅವರ ಸಹೋದರಿ ಸವಿತಾ ಅವರು ನೀಡಿರುವ ದೂರು ಆಧರಿಸಿ ಒಂಬತ್ತು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಕಿರುಕುಳ ಮತ್ತು ಆತ್ಮಹತ್ಯೆಯಿಂದ ಸಹೋದರ ಮೃತಪಟ್ಟಿದ್ದಾನೆ ಎಂದು ಸಚಿನ್ ಅವರ ಸಹೋದರಿ ಸವಿತಾ ಅವರು ನೀಡಿರುವ ದೂರು ಆಧರಿಸಿ ಒಂಬತ್ತು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಕಿರುಕುಳ ಮತ್ತು ಆತ್ಮಹತ್ಯೆಯಿಂದ ಸಹೋದರ ಮೃತಪಟ್ಟಿದ್ದಾನೆ ಎಂದು ಮೃತ ಸಚಿನ್ ಸಹೋದರಿ ಸವಿತಾ ಆರೋಪಿಸಿದ್ದಾರೆ. ಮರಣಪತ್ರ ಬರೆದಿಟ್ಟ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅಂದರೆ ಅವರಿಗೆ ಯಾರೋ ಕಿರುಕುಳ ಕೊಟ್ಟಿರಬೇಕು. ಇನ್ನು ಅನೇಕ ವಿಷಯಗಳು ಬಹಿರಂಗವಾಗ ಬೇಕಾದರೆ ತಕ್ಷಣ ರಾಜ್ಯದ ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಮೃತ ಸಚಿನ್ ಅವರ ಕುಟುಂಬಕ್ಕೆ ನ್ಯಾಯ ಸಿಗಬೇಕಾದರೆ ಪ್ರಕರಣವನ್ನು ತನಿಖೆ ಮಾಡಲು ಸಿಬಿಐಗೆ ಒಪ್ಪಿಸಬೇಕಾಗಿದೆ.ಈ ಕುರಿತು ಜನವರಿ 2 ರಂದು ಗುರುವಾರ ಬೆಳಿಗ್ಗೆ 11 ಗಂಟೆಗೆ ಕೊಪ್ಪಳ ಜಿಲ್ಲಾ ವಿಶ್ವಕರ್ಮ ಸಮಾಜದ ಜಿಲ್ಲಾ ಅಧ್ಯಕ್ಷರಾದ ನಾಗೇಶ್ ಕುಮಾರ್ ಕಂಸಾಳ ಹಾಗೂ ವಿಶ್ವಕರ್ಮ ಸಂಘಟನೆಗಳ ನೇತೃತ್ವದಲ್ಲಿ ಕೊಪ್ಪಳ ನಗರದ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಸಾಂಕೇತಿಕ ಪ್ರತಿಭಟನೆ ಮಾಡಿ, ಕೊಪ್ಪಳ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಹಾಗೂ ಮುಖ್ಯಮಂತ್ರಿಗಳಿಗೆ ಸಚಿನ್ ಪ್ರಕರಣವನ್ನು ತನಿಖೆ ಮಾಡಲು ಸರ್ಕಾರ ಸಿಬಿಐಗೆ ಒಪ್ಪಿಸಬೇಕು ಎಂದು ಮನವಿ ಸಲ್ಲಿಸುತ್ತೇವೆ ಎಂದು ಹೇಳಿದರು.