ಮಾತೃ ಪಕ್ಷಕ್ಕೆ ಮತ್ತೆ ಮರಳಲು ಸಿದ್ದರಾಮಯ್ಯಗೆ ವಿಶ್ವನಾಥ್ ಆಹ್ವಾನ
ಬೆಂಗಳೂರು 07: ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ ಬಳಿಕ ಜನತಾ ಪರಿವಾರವನ್ನು ಒಗ್ಗೂಡಿಸುವ ಯತ್ನದಲ್ಲಿರುವ ವಿಶ್ವನಾಥ್ ಅವರು, ಕಾಂಗ್ರೆಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುವಂತೆ ಆಹ್ವಾನ ನೀಡಿದ್ದಾರೆಂದು ಮಂಗಳವಾರ ತಿಳಿದುಬಂದಿದೆ.
ಜೆಡಿಎಸ್ ಕಚೇರಿಯಲ್ಲಿ ಮಾತನಾಡಿರುವ ವಿಶ್ವನಾಥ್ ಅವರು, ಜನತಾ ಪರಿವಾರವನ್ನು ಒಗ್ಗೂಡಿಸಬೇಕಿದೆ. ಪಕ್ಷ ಮತ್ತು ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ನಾವೆಲ್ಲರೂ ಒಗ್ಗೂಡಬೇಕಿದೆ. ಹೀಗಾಗಿಯೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುನಃ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಬೇಕೆಂದು
ಹೇಳಿದ್ದಾರೆ.
ಸಿದ್ದರಾಮಯ್ಯ ಅವರು ಬೆಳೆದಿದ್ದು ಜನತಾ ಪರಿವಾರದಲ್ಲಿಯೇ ಆಗಿದೆ. ದೇವೇಗೌಡ ಅವರು ಸಿದ್ದರಾಮಯ್ಯ ಅವರನ್ನು ಬೆಳೆಸಿದ್ದರು. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಮಾಡಿದ್ದೂ ಕೂಡ ಜೆಡಿಎಸ್. ಹೀಗಾಗಿ ಸಿದ್ದರಾಮಯ್ಯ ಅವರು ತಾಯಿ ಪಕ್ಷಕ್ಕೆ ಮತ್ತೆ ಸೇರ್ಪಡೆಗೊಳ್ಳಬೇಕೆಂದು ತಿಳಿಸಿದ್ದಾರೆ.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 