ವಿತಾವಿ ಕುಲಸಚಿವ ಡಾ: ದೇಶಪಾಂಡೆ ಅಭಿಮತ | ಎಫ್ಡಿಪಿ ಕಾಯರ್ಾಗಾರ ಉದ್ಘಾಟನೆ ಫಲಿತಾಂಶ ಆಧಾರಿತ ಶಿಕ್ಷಣ ಪದ್ದತಿ ಅನುಷ್ಠಾನ ಇಂದಿನ ಅವಶ್ಯ
ಬೆಳಗಾವಿ, 8: ತಾಂತ್ರಿಕವಾಗಿ ಬದಲಾಗುತ್ತಿರುವ ಇವತ್ತಿನ ಸನ್ನಿವೇಷದಲ್ಲಿ ಔದ್ಯೋಗಿಕ ರಂಗಕ್ಕೆ ಅವಶ್ಯವಿರುವ ಕೌಶಲ್ಯ ಹಾಗೂ ಜ್ಞಾನವನ್ನು ಹೊಂದಿದ ಅಭಿಯಂತರರನ್ನು ಸಮಾಜಕ್ಕೆ ನೀಡುವ ಒಂದು ಗುರುತರ ಜವಾಬ್ದಾರಿ ನಮ್ಮೆಲ್ಲೆರ ಮೇಲಿದೆ ಆ ನಿಟ್ಟಿನಲ್ಲಿ ಎಲ್ಲ ಅಭಿಯಾಂತ್ರಿಕ ಮಹಾವಿದ್ಯಾಲಯಗಳು ಫಲಿತಾಂಶ ಆಧಾರಿತ ಶಿಕ್ಷಣ (ಓಬಿಈ) ಪದ್ದತಿಯನ್ನು ಅನುಷ್ಠಾನಗೊಳಿಸುವುದು ಬಹಳ ಅವಶ್ಯಕವಾಗಿದೆ ಎಂದು ವಿ ತಾ ವಿ ಕುಲಸಚಿವರಾದ ಡಾ.ಎ.ಎಸ್. ದೇಶಪಾಂಡೆ ಹೇಳಿದರು. ಅವರು ಮಂಗಳವಾರ ಫಲಿತಾಂಶ ಆಧಾರಿತ ಶಿಕ್ಷಣ (ಓಬಿಈ) ಮತ್ತು ಎನ್ಬಿಎ ಮಾನ್ಯತೆ ಕುರಿತು ಬೆಳಗಾವಿಯ ಕೆಎಲ್ಎಸ್ ಗೋಗಟೆ ತಾಂತ್ರಿಕ ಮಹಾವಿದ್ಯಾಲಯ, ಟೆಕ್ಯೂಪ 1.3 ಪ್ರಾಯೋಜಕತ್ವದಲ್ಲಿ ಹಮ್ಮಿಕೊಂಡ ಒಂದು ವಾರದ ಎಫ್ಡಿಪಿ ಕಾಯರ್ಾಗಾರ ಉದ್ಘಾಟಿಸಿ ಮಾತನಾಡಿದರು.
ಫಲಿತಾಂಶ-ಆಧಾರಿತ ಶಿಕ್ಷಣ (ಓಬಿಈ) ಮಾದರಿಯ ಅನುಷ್ಠಾನ, ಭಾರತದಲ್ಲಿ ತಾಂತ್ರಿಕ ಶಿಕ್ಷಣವನ್ನು ಸುಧಾರಿಸಲು ಮತ್ತು ಈ ಪದ್ದತಿಯಲ್ಲಿ ಕಲಿತ ಪದವೀಧರರು ತಮ್ಮ ಜಾಗತಿಕ ಪ್ರತಿಸ್ಪಧರ್ಿಗಳೊಂದಿಗೆ ಸ್ಪಧರ್ಿಸಲು ಸಹಾಯ ಮಾಡುತ್ತದೆ ಎಂದು ಹೇಳಿದರು. ಇವತ್ತು ಎಲ್ಲ ತಾಂತ್ರಿಕ ಸಂಸ್ಥೆಗಳು ನೀಡುವ ಕೋಸರ್್ ಗಳಿಗೆ ರಾಷ್ಟ್ರೀಯ ಮಾನ್ಯತಾ ಮಂಡಳಿ (ಎನ್ಬಿಎ) ಯಿಂದ ಮಾನ್ಯತೆ ಪಡೆಯುವುದು ಕಡ್ಡಾಯವಾಗಿದೆ ಮತ್ತು ಮಾನ್ಯತೆ ಪಡೆಯಲು ಎಲ್ಲ ತಾಂತ್ರಿಕ ಸಂಸ್ಥೆಗಳು ಫಲಿತಾಂಶ ಆಧಾರಿತ ಶಿಕ್ಷಣ (ಓ ಬಿ ಈ) ಮಾದರಿಯನ್ನು ಅನುಸರಿಸುವುದು ಕಡ್ಡಾಯವಾಗಿದೆ ಎಂದು ಅವರು ಹೇಳಿದರು.
ಎನ್ಬಿಎ ಮಾನ್ಯತೆ ಜಾಗತಿಕ ಮಾನ್ಯತೆಯಾಗಿದ್ದು ಎಲ್ಲಾ ಕೋಸರ್್ಗಳಿಗೆ ಜಾಗತಿಕ ಮನ್ನಣೆ ದೊರೆಯುತ್ತದೆ ಜೊತೆಗೆ ಇದು ತಾಂತ್ರಿಕ ಶಿಕ್ಷಣ ಸಂಸ್ಥೆಗಳಿಗೆ ಅವುಗಳ ಸಾಮರ್ಥ್ಯ, ದೌರ್ಬಲ್ಯ ಮತ್ತು ಅವಕಾಶಗಳನ್ನು ತಿಳಿಯಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದರು. ಎನ್ ಬಿ ಎ ಮಾನ್ಯತೆ ಶೈಕ್ಷಣಿಕ ಸಂಸ್ಥೆಗಳಿಗೆ ಸಕರ್ಾರದಿಂದ ಸಹಾಯಧನ ಪಡೆದುಕೊಳ್ಳಲು ಸಹಾಯ ಮಾಡುತ್ತದೆ ಮತ್ತು ಇದು ಶಿಕ್ಷಣ ಸಂಸ್ಥೆಯಲ್ಲಿ ಆರೋಗ್ಯಕರ ಸ್ಪಧರ್ಾಮನೋಭಾವದ ಕಲಿಕಾ ವಾತಾವರಣವನ್ನು ನಿಮರ್ಿಸುತ್ತದೆ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ಕುರಿತು ಮಾತನಾಡಿದ ಅವರು, ಈ ನೀತಿಯು ಶಿಕ್ಷಣ ಕ್ಷೇತ್ರದಲ್ಲಿ ಮಾದರಿ ಬದಲಾವಣೆಯನ್ನು ತರುತ್ತದೆ ಮತ್ತು ಎಲ್ಲಾ ಶಿಕ್ಷಣ ಸಂಸ್ಥೆಗಳು ಮತ್ತು ವಿದ್ಯಾಥರ್ಿಗಳು ಈ ಬದಲಾವಣೆಗಳನ್ನು ಸ್ವೀಕರಿಸಲು ಸಿದ್ಧರಾಗಿರಬೇಕು. ಈ ನೀತಿಯು ಎಲ್ಲಾ ಶಿಕ್ಷಣ ಕ್ಷೇತ್ರಗಳನ್ನು ಒಂದೇ ವೇದಿಕೆಯಲ್ಲಿ ತರುತ್ತದೆ, ಇದರಿಂದಾಗಿ ಜಾಗತಿಕ ಬದಲಾವಣೆಗಳನ್ನು ಎದುರಿಸಲು ಎಲ್ಲಾ ರೀತಿಯ ಕೌಶಲ್ಯ ಮತ್ತು ಜ್ಞಾನವನ್ನು ಪರಿಣಾಮಕಾರಿಯಾಗಿ ಅರಿಯಲು ಇದು ಸಯಹ ಮಾಡುತ್ತದೆ ಎಂದು ಹೇಳಿದರು.
ಈ ಮೊದಲು ಜಿಐಟಿ ಪ್ರಾಚಾರ್ಯ ಪ್ರೊ. ಡಿ. ಎ. ಕುಲಕಣರ್ಿ ಸ್ವಾಗತಿಸಿದರು, ಪ್ರೊ. ವೀಣಾ ದೇಸಾಯಿ ಪ್ರಾಸ್ತಾವಿಕ ನುಡಿಗಳನ್ನಾಡಿದರು, ಪ್ರೊ. ಸಾಗರ್ ಸಂತಾಜಿ ವಂದಿಸಿದರು.
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ
ಬಡ ಅಂಗವಿಕಲ ಸರ್ಫರಾಜ್ ಬಿಸ್ತಿಗೆ ಫೇಸ್ಬುಕ್ ಫ್ರೆಂಡ್ಸ್ ಸರ್ಕಲ್ ತಂಡದಿಂದ ಹೊಸ ವೀಲ್ಚೇರ್ ಉಡುಗೊರೆ 