ವಿವಿಪ್ಯಾಟ್, ಇವಿಎಂಗಳ ಹ್ಯಾಕ್ ಸಂಶಯ! ತನಿಖೆಗೆ ಪಾಟೀಲ ಮನವಿ
ಲೋಕದರ್ಶನವರದಿ
ರಾಣೇಬೆನ್ನೂರು 02: ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆ ನಂತರ ನಡೆದ ಮತ ಎಣಿಕೆ ಕಾರ್ಯದಲ್ಲಿ ವಿವಿ ಪ್ಯಾಟ್ ಮತ್ತು ಇವಿಎಂಗಳನ್ನು ಹ್ಯಾಕ್ ಮಾಡಿ ದುರ್ಬಳಕೆ ಮಾಡಿಕೊಂಡಿರುವ ಅನುಮಾನಗಳು ಬಲವಾಗಿ ಬೇರುರುತ್ತಲಿವೆ. ಈ ಕುರಿತು ಸೂಕ್ತ ತನಿಖೆ ನಡೆಸಿ ಮೊಸಕ್ಕೊಳಗಾದ ಕ್ಷೇತ್ರದಲ್ಲಿ ಮರು ಚುನಾವಣೆ ನಡೆಸಲು ಮುಂದಾಗಬೇಕು ಎಂದು ಒತ್ತಾಯಿಸಿರುವ ಕನರ್ಾಟಕ ರಾಜ್ಯ ರೈತ ಸಂಘದ ರಾಜ್ಯ ಸಂಘಟನಾ ಕಾರ್ಯದಶರ್ಿ ರವೀಂದ್ರಗೌಡ ಪಾಟೀಲ ಅವರು ಮನವಿ ಮಾಡಿದ್ದಾರೆ.
ಈ ಕುರಿತು ಮುಖ್ಯ ಚುನಾವಣಾ ಆಯುಕ್ತರು, ರಾಜ್ಯ ಚುನಾವಣಾ ಆಯುಕ್ತರು, ಮತ್ತು ರಾಜ್ಯಪಾಲರು, ಮುಖ್ಯ ಕಾರ್ಯದಶರ್ಿಗಳಿಗೆ ಸುದೀರ್ಘವಾದ ಪತ್ರ ಬರೆದಿರುವ ಪಾಟೀಲ ಚುನಾವಣೆ ಫಲಿತಾಂಶವು ಯಡಿಯೂರಪ್ಪನವರ ಪ್ರವಾಹವೂ ಅಲ್ಲ, ನರೇಂದ್ರ ಮೋದಿ ಅವರ ಸುನಾಮಿಯೂ ಅಲ್ಲ ಆದರೆ, ಕಂಪ್ಯೂಟರೀಕರಣ ಜಗತ್ತಿನಲ್ಲಿ
ಏನೆಲ್ಲ ಮಾಡಲು ಸಾಧ್ಯವಿದೆ ಎನ್ನುವುದನ್ನು ಈ ಫಲಿತಾಂಶ ತೋರಿಸಿಕೊಟ್ಟಿದೆ ಎಂದಿದ್ದಾರೆ.
17ನೇ ಲೋಕಸಭಾ ಚುನಾವಣೆಯ 547 ಲೋಕಸಭಾ ಫಲಿತಾಂಶವು ಜಗತ್ತಿಗೆ ವಿಸ್ಮಯವನ್ನುಂಟು ಮಾಡಿದೆ. 2014ರಲ್ಲಿ ಕೇಂದ್ರ ಅಧಿಕಾರದಲ್ಲಿದ್ದ, ಮೋದಿ ಅವರು ಈ ದೇಶದ ರೈತರಿಗೆ, ರೈತಾಪಿ ವರ್ಗದವರಿಗೆ ಸುಳ್ಳು ಭರವಸೆ ನೀಡಿದೆ. ಮತ್ತು ಬಡವರ ಮಧ್ಯಮ ವರ್ಗದವರ ವಿರೋಧಿ ಧೋರಣೆ ಅನುಸರಿಸಿದೆ. ಆದರೂ ಇಂತಹ ಜನ ವಿರೋಧದ ಮಧ್ಯಯೂ ತಮ್ಮ ಪಕ್ಷದ ಅಭ್ಯಥರ್ಿಗಳನ್ನು ಲಕ್ಷಾಂತರ ಮತಗಳ ಅಂತರದಿಂದ ಗೆಲ್ಲಿಸಿರುವುದು ಸೂಜಿಗದ ಸಂಗತಿಯಾಗಿದೆ ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.
ಈ ಫಲಿತಾಂಶ ಗಮನಿಸಿದರೆ, ಇವಿಎಂ., ವಿವಿಪ್ಯಾಟ್, ಅಳವಡಿಕೆಯಾಗಿರುವುದು ಸಂಶಯಕ್ಕೆ ಕಾರಣವಾಗಿದೆ. ಕೂಡಲೇ, ಇವುಗಳ ಬಗ್ಗೆ ತನಿಖೆ ನಡೆಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಯೋಗಕ್ಕೆ ಸಲ್ಲಿಸಿರುವ ಮನವಿಯಲ್ಲಿ ಒತ್ತಾಯಿಸಿರುವ ಪಾಟೀಲ ಅವರು ತನಿಖೆಗೆ ಮುಂದಾಗದಿದ್ದಲ್ಲಿ, ಉಚ್ಚನ್ಯಾಯಾಲಯದ ಮೊರೆ ಹೋಗುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಸಿದ್ದಾರೆ.ಅ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 