ಮತ ಚಲಾಯಿಸಿ ಸೂಕ್ತ ಜನ ಪ್ರತಿನಿಧಿ ಆಯ್ಕೆ ಮಾಡಿ
Vote and choose the right representative
ರಾಣಿಬೆನ್ನೂರು 16: ಪ್ರಜಾಪ್ರಭುತ್ವ, ಚುನಾವಣೆ ಮತ್ತು ಮತದಾನ ಒಂದಕ್ಕೊಂದು ನಿಕಟವಾದ ಸಂಪರ್ಕ ಹೊಂದಿರುವ ತ್ರಿಕೋನ ಅಂಶಗಳು ನಾಗರಿಕರು ಮತ ಚಲಾಯಿಸುವ ಮೂಲಕ ದೇಶದಅಭಿವೃದ್ಧಿ ಬೆಳವಣಿಗೆಗೆ ಸೂಕ್ತ ಜನ ಪ್ರತಿನಿಧಿಗಳನ್ನು ಆಯ್ಕೆ ಮಾಡುವುದರ ಮೂಲಕ ಉತ್ತಮ ಸರ್ಕಾರವನ್ನು ರಚಿಸಿದರೆ ಮಾತ್ರದೇಶದ ಪ್ರಜೆಗಳ ಸರ್ವತೋಮುಖಅಭಿವೃದ್ಧಿ ಸಾಧ್ಯ ಎಂದು ವಕೀಲ ಕುಮಾರ ಮಡಿವಾಳರ ಹೇಳಿದರು
ಇಲ್ಲಿನ ಕೆಎಲ್ಇ ಸಂಸ್ಥೆಯ ರಾಜ-ರಾಜೇಶ್ವರಿ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯದಲ್ಲಿ ನಡೆದ ವಿದ್ಯಾರ್ಥಿ ಒಕ್ಕೂಟ ರಚನೆ ಮತ್ತು ಪ್ರಮಾಣ ವಚನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಪ್ರತಿಯೊಬ್ಬರೂ ತಮ್ಮ ಮತದಾನದ ಹಕ್ಕನ್ನು ಸೂಕ್ತ ಅಭ್ಯರ್ಥಿಗಳಿಗೆ ನೀಡುವ ಮೂಲಕ ತಮ್ಮ ಜವಾಬ್ದಾರಿಯನ್ನು ನಿರ್ವಹಿಸಬೇಕೆಂದು ವಿದ್ಯಾರ್ಥಿನಿಯರಿಗೆ ಕರೆ ನೀಡಿದರು.ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊಽ ನಾರಾಯಣ ನಾಯಕ ಅಧ್ಯಕ್ಷತೆ ವಹಿಸಿದ್ದರು. ಪ್ರೊಽ ನಾಗರಾಜ ಗವಿಯಪ್ಪನವರ. ಪೃಥ್ವಿ ಎ. ಕೃಪಾ ಮೋಟೇಬೆನ್ನೂರು. ಪ್ರೊ. ಸೋಮಶೇಖರ ಹೊನ್ನಾಳಿ ಸೇರಿದಂತೆ ಮತ್ತಿತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 