ಮತದಾರರ ಪಟ್ಟಿ ಪರಿಷ್ಕರಣೆ: ಜಿಲ್ಲಾಧಿಕಾರಿಗಳಿಂದ ಪರಿಶೀಲನೆ
ಗದಗ 04: ಗದಗ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಜಿಲ್ಲೆಯಲ್ಲಿ ನಡೆಯುತ್ತಿರುವ ಮತದಾರ ಪಟ್ಟಿ ಪರಿಷ್ಕರಣಾ ಕಾರ್ಯ ಪರಿಶೀಲನೆ ಕುರಿತಂತೆ ನಭಾಪೂರ ಹಾಗೂ ಕಬಲಾಯಕಟ್ಟಿ ತಾಂಡಾಗಳಿಗೆ ಭೇಡಿ ನೀಡಿ ಪರಿಶೀಲಿಸಿದರು. ಗದಗ ತಹಶೀಲ್ದಾರ ಶ್ರೀನಿವಾಸಮೂತರ್ಿ ಹಾಗೂ ಮತಗಟ್ಟೆ ಅಧಿಕಾರಿ ಸಿಬ್ಬಂದಿಗಳು ಜೊತೆಗಿದ್ದರು.
ಭಾರತ ಚುನಾವಣಾ ಆಯೋಗದ ನಿದರ್ೇಶನದಂತೆ ವಿಧಾನಸಭಾ ಕ್ಷೇತ್ರಗಳ ಮತದಾರ ಪಟ್ಟಿ ಪರಿಷ್ಕರಣೆ ಡಿಸೆಂಬರ್ 20 ರವರೆಗೆ ನಡೆಯುತ್ತಿದೆ. ಈಗಾಗಲೇ ನವೆಂಬರ್ 20 ಹಾಗೂ ತದನಂತರ ವಿಶೇಷ ಅವಧಿಯಾದ ನವೆಂಬರ್ 23 ರಿಂದ 25 ರ ಅವಧಿಯಲ್ಲಿ 1-1-2019 ಕ್ಕೆ 18 ವರ್ಷ ಪೂರ್ಣಗೊಳ್ಳುವವರು ಅಥವಾ ಈವರೆಗೆ ಹೆಸರು ಸೇರಿಸದ ಅರ್ಹ ಮತದಾರರು ಮತದಾರ ಪಟ್ಟಿಯಲ್ಲಿ ಸೇರಿಕೊಳ್ಳಲು ನಿಗದಿತ ಅಜರ್ಿ ನಮೂನೆಗಳನ್ನು ದಾಖಲೆ ಸಹಿತ ನೀಡಲು ಅವಕಾಶ ನೀಡಲಾಗಿತ್ತು. ಜೊತೆಗೆ ಮತದಾರ ಪಟ್ಟಿಯಲ್ಲಿ ವಿವಿಧ ಕಾರ್ಯಗಳಿಂದ ಹೆಸರು ಕಡಿಮೆ ಅಥವಾ ವಿಳಾಸ ಬದಲಾವಣೆ ದೋಷಗಳ ನಿವಾರಣೆಗೆ ಕೂಡ ಅಜರ್ಿಗಳನ್ನು ಸ್ವೀಕರಿಸಲಾಗಿತ್ತು. ಈಗ ಅಜರ್ಿಗಳ ಪರಿಶೀಲನೆ ಕಾರ್ಯ ನಡೆದಿದ್ದು ಅಂತಿಮವಾಗಿ 2019 ರ ಜನೆವರಿ 4 ರಂದು ಜಿಲ್ಲೆಯ ನಾಲ್ಕು ವಿಧಾನ ಸಭಾ ಕ್ಷೇತ್ರಗಳ ಮತದಾರ ಯಾದಿ ಪ್ರಕಟವಾಗಲಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 