ಜ್ಯೋತಿರಾಧಿತ್ಯ ಸಿಂಧಿಯಾ ಹೀಗೆಕೆ ಮಾಡಿದ? ರಾಹುಲ್ ಅಚ್ಚರಿ ..!
ನವದೆಹಲಿ, ಮಾ 12, ಜ್ಯೋತಿರಾಧಿತ್ಯ ಸಿಂಧಿಯಾ ಅವರು ಯಾವ ಸಮಯದಲ್ಲಾದರೂ ಭೇಟಿಯಾಗಲು ನನ್ನ ಮನೆಗೆ ಬರುವ ಅವಕಾಶವಿತ್ತು ಅವರು ಹೀಗೆಕೆ ಮಾಡಿದರು ಎಂಬುದು ಇನ್ನೂ ಗೊತ್ತಾಗಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಚ್ಚರಿ ವ್ಯಕ್ತಪಡಿಸಿದ್ದಾರೆ. ರಾಹುಲ್ ಗಾಂಧಿ ಅವರನ್ನು ಭೇಟಿಯಾಗಲು ಜ್ಯೋತಿರಾಧಿತ್ಯ ಸಿಂಧಿಯಾ ಹಲವು ಭಾರೀ ಪ್ರಯತ್ನ ಮಾಡಿದ್ದರೂ ಅನುಮತಿ ನಿರಕಾರಿಸಲಾಗಿತ್ತು ಎಂಬ ವರದಿಗಳ ಹಿನ್ನಲೆಯಲ್ಲಿ ಅವರು ಈ ಸ್ಪಷ್ಟಣೆ ನೀಡಿದ್ದಾರೆ. ಸಿಂಧ್ಯಾ ಅವರು ಯಾವುದೇ ಸಮಯದಲ್ಲೂ ನನ್ನ ಮನೆಗೆ ಬರುವ ಎಲ್ಲಾ ಅವಕಾಶವಿತ್ತು ಸಲಿಗೆ ಇತ್ತು, ಸ್ವಾತಂತ್ರ್ಯವಿತ್ತು ಆದರೂ ಅವರು ಹೀಗೆಕೆ ಮಾಡಿದರು ಗೊತ್ತಿಲ್ಲ ಈಗ ಅವರು ಬಹಳ ದೂರ ಹೋಗಿದ್ದಾರೆ ಇನ್ನು ಮಾತುಕತೆ ಮುಗಿದ ಅಧ್ಯಾಯ ಎಂದು ರಾಹುಲ್ ಹೇಳಿದ್ದಾರೆ.ಈಗಾಗಲೇ ಕಾಂಗ್ರೆಸ್ ತೊರೆದಿರುವ ಜ್ಯೋತಿರಾಧಿತ್ಯ ಸಿಂಧಿಯಾ ಬಿಜೆಪಿಗೆ ಅಧಿಕೃತವಾಗಿ ಸೇರಿದ್ದು ಇದೆ 22 ರಂದು ಮಧ್ಯಪ್ರದೇಶದಿಂದ ನಡೆಯಲಿರುವ ರಾಜ್ಯಸಭೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 