ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಕಾಡಾನೆ ಪ್ರತ್ಯಕ್ಷ
ಮಂಗಳೂರು, ಫೆ 20, ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಗುರುವಾರ ಮುಂಜಾನೆ ಕಾಡಾನೆ ಪ್ರತ್ಯಕ್ಷವಾಗಿತ್ತು. ಆನೆಯು ಬೆಳಿಗ್ಗೆ ಸುಮಾರು 5.30ಕ್ಕೆ ಪಟ್ಟಣದ ಕಾಶಿ ಕಟ್ಟೆಯಿಂದ ನುಚಿಲಾಕ್ಕೆ ಯಾವುದೇ ಹಾನಿ ಉಂಟುಮಾಡದೆ ನಡೆದುಕೊಂಡು ಹೋಗುತ್ತಿರುವುದು ಕಂಡುಬಂದಿದೆ ಎಂದು ಕುಕ್ಕೆ ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ (ಆರ್ಎಫ್ಒ) ತ್ಯಾಗರಾಜ್ ಹೇಳಿದ್ದಾರೆ.
ಇದೇ ಆನೆಯನ್ನು ಕೆಲ ದಿನಗಳ ಹಿಂದೆ ಕುಕ್ಕೆ ಸುಬ್ರಹ್ಮಣ್ಯ ಬಳಿಯ ಹರಿಹರ ಎಂಬ ಸಣ್ಣ ಹಳ್ಳಿಯಲ್ಲಿ ಗುರುತಿಸಲಾಗಿತ್ತು. ಆನೆಯು ಕೆಲ ದಿನಗಳಿಂದ ಹತ್ತಿರದ ಕಾಡುಗಳಲ್ಲಿ ಸುತ್ತಾಡುತ್ತಿದೆ. ಆದರೆ, ಇಲ್ಲಿಯವರೆಗೆ ಆನೆ ಜನರಿಗೆ ಯಾವುದೇ ತೊಂದರೆ ಮಾಡಿಲ್ಲ. ಅಥವಾ ಯಾವುದೇ ಆಸ್ತಿ-ಪಾಸ್ತಿಗೆ ಹಾನಿ ಮಾಡಿಲ್ಲ ಎಂದು ತ್ಯಾಗರಾಜ್ ಹೇಳಿದರು. ಪ್ರಸಿದ್ಧ ಯಾತ್ರಾ ಕೇಂದ್ರ ಕುಕ್ಕೆ ಸುಬ್ರಹ್ಮಣ್ಯ ಪಶ್ಚಿಮ ಘಟ್ಟಗಳ ತಪ್ಪಲಲ್ಲಿದೆ.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 