ಚೀಟಿ ವ್ಯವಹಾರದ ಹೆಸರಿನಲ್ಲಿ 8 ಕೋಟಿ ರೂ ವಂಚಿಸಿ ಮಹಿಳೆ ಪರಾರಿ
ಬೆಂಗಳೂರು,ಮಾ. 5 ,ಚೀಟಿ ವ್ಯವಹಾರ ನಡೆಸುತ್ತಿದ್ದ ಮಹಿಳೆಯೊಬ್ಬಳು 8 ಕೋಟಿ ರೂ ವಂಚಿಸಿ ಪರಾರಿಯಾಗಿರುವ ಘಟನೆ ಬಸವನಪುರದಲ್ಲಿ ನಡೆದಿದೆ.ಹಲವು ವರ್ಷಗಳಿಂದ ಚೀಟಿ ವ್ಯವಹಾರ ನಡೆಸುತ್ತಿದ್ದ ಬಸವನಪುರದ ಮಂಜುಳಾ ಎಂಬ ಮಹಿಳೆ, ಸುಮಾರು ನೂರಕ್ಕೂ ಹೆಚ್ಚು ಜನರ ಬಳಿ 8 ಕೋಟಿ ರೂಕ್ಕಿಂತ ಅಧಿಕ ಹಣ ಚೀಟಿ ಕಟ್ಟಿಸಿಕೊಂಡು ಪರಾರಿಯಾಗಿದ್ದಾಳೆ.ಮಂಜುಳಾ, ಮೊದಲು ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡಿಕೊಂಡಿದ್ದಳು. ಬಳಿಕ ಚೀಟಿ ವ್ಯವಹಾರ ಆರಂಭಿಸಿ ಮೊದಲು ಗಾರ್ಮೆಂಟ್ಸ್ ನಲ್ಲಿ ಪರಿಚಯವಿದ್ದ ಮಹಿಳೆಯರಿಂದ ಚೀಟಿ ಹಾಕಿಸಿಕೊಂಡಿದ್ದಳು.ಮೊದ ಮೊದಲು ಚೀಟಿ ಹಣವನ್ನು ಕಾಲ ಕಾಲಕ್ಕೆ ನೀಡುವ ಮೂಲಕ ಜನರ ವಿಶ್ವಾಸವನ್ನು ಗಳಿಸಿಕೊಂಡಿದ್ದಳು. ಹೀಗಾಗಿ ಹೆಚ್ಚಾಗಿ ಗಾರ್ಮೆಂಟ್ಸ್ ನೌಕರರು, ಆಟೋ ಡ್ರೈವರ್, ದಿನಗೂಲಿ ನೌಕರರು ಚೀಟಿ ಹಾಕಿದ್ದರು ಎಂದು ತಿಳಿದು ಬಂದಿದೆ.ಮಂಜುಳಾ ತಾನು ಖರೀದಿಸಿದ್ದ ಮನೆಯನ್ನೂ ಮಾರಿಕೊಂಡು ಪರಾರಿಯಾಗಿದ್ದಾಳೆ. ಈ ಹಿನ್ನಲೆಯಲ್ಲಿ ವಂಚನೆಗೊಳಗಾದವರು ಹುಳಿಮಾವು ಪೊಲೀಸ್ ಠಾಣೆಯಲ್ಲಿ ಮಂಜುಳಾ ವಿರುದ್ಧ ದೂರು ದಾಖಲಿಸಿಕೊಂಡು.ಸದ್ಯ ಪೊಲೀಸರು ಮಂಜುಳಾ ಪತ್ತೆಗಾಗಿ ಶೋಧಕಾರ್ಯ ಆರಂಭಿಸಿದ್ದಾರೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 