ನಗರ ಸಭಾಧ್ಯಕ್ಷ ಪಟೇಲರಿಂದ ವಾರ್ಡ್ ಸಂಚಾರ- ಜನರ ಸಮಸ್ಯೆಗಳಿಗೆ ನೇರ ಸ್ಪಂದನೆ
Ward traffic from City Council Chairman Patel - direct response to people's problems
ನಗರ ಸಭಾಧ್ಯಕ್ಷ ಪಟೇಲರಿಂದ ವಾರ್ಡ್ ಸಂಚಾರ- ಜನರ ಸಮಸ್ಯೆಗಳಿಗೆ ನೇರ ಸ್ಪಂದನೆ
ಕೊಪ್ಪಳ ಸಪ್ಟಂಬರ್ 24, ನಗರದ ಸಾರ್ವಜನಿಕರಿಗೆ ನಗರಸಭೆ ವತಿಯಿಂದ ಕೈಗೊಳ್ಳಲಾಗಿರುವ ಮೂಲಭೂತ ಅಗತ್ಯ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಹಾಗೂ ಓಣಿಗಳಲ್ಲಿ ಇರುವ ಸಮಸ್ಯೆಗಳನ್ನು ಆಲಿಸಲು ಕೊಪ್ಪಳ ನಗರಸಭೆಯ ಅಧ್ಯಕ್ಷರಾದ ಅಮ್ಜದ್ ಪಟೇಲ್ ರವರು ವಾರ್ಡ್ ಸಂಚಾರ ಕೈಗೊಂಡಿದ್ದು ನಗರದ 27ನೇ ವಾರ್ಡಿನ ವ್ಯಾಪ್ತಿಯಲ್ಲಿ ಬರುವ ಬಿಟಿ ಪಾಟೀಲ್ ನಗರ ಬಡಾವಣೆಗೆ ಭೇಟಿ ನೀಡಿ ಜನರಿಂದ ಸಮಸ್ಯೆಗಳನ್ನು ಆಲಿಸಿ ನೇರ ಸ್ಪಂದನೆ ನೀಡಿ ಅದರ ಇತ್ಯರ್ತಕ್ಕಾಗಿ ಅಲ್ಲಿಯ ಉಪಸ್ಥಿತರಿದ್ದ ನಗರಸಭೆಯ ಸಿಬ್ಬಂದಿ ವರ್ಗ ಮತ್ತು ಅಧಿಕಾರಿ ವರ್ಗದವರಿಗೆ ಕಟ್ಟುನಿಟ್ಟಿನ ಸೂಚನೆ ಜಾರಿಗೊಳಿಸಿ ಕೂಡಲೇ ಅವ್ಯವಸ್ಥೆ ಸರಿಪಡಿಸುವಂತೆ ಆದೇಶಿಸಿದರು, ಸಾರ್ವಜನಿಕರ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು ,ಸ್ವಚ್ಛತೆ, ವಿದ್ಯುತ್ ದೀಪ, ಚರಂಡಿಗಳ ಸ್ವಚ್ಛತೆ, ಇತರ ವಿಷಯಗಳ ಬಗ್ಗೆ ಸಾರ್ವಜನಿಕರು ಅಧ್ಯಕ್ಷರ ಗಮನ ಸೆಳೆದಾಗ ಅವರ ಸಮಸ್ಯೆಗಳಿಗೆ ನೇರ ಸ್ಪಂದನೆ ನೀಡಿ ಅವರ ಬೇಕು ಬೇಡಿಕೆಗಳ ಈಡೇರಿಕೆಗಾಗಿ ನಗರಸಭೆ ವತಿಯಿಂದ ಕೈಗೊಳ್ಳಬಹುದಾದ ಎಲ್ಲಾ ಕಾರ್ಯಗಳನ್ನು ಕೂಡಲೇ ನಿರ್ವಹಿಸಲಾಗುವುದು ಎಂದು ಜನರಿಗೆ ಅವರು ಭರವಸೆ ನೀಡಿದರು, ಅವರೊಂದಿಗೆ ನಗರಸಭೆಯ ವಾರ್ಡಿನ ಸದಸ್ಯರು ಮಾಜಿ ಅಧ್ಯಕ್ಷರು ನಗರಸಭೆಯ ಅಧಿಕಾರಿ ಸಿಬ್ಬಂದಿ ವರ್ಗದವರು ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಾಲ್ಗೊಂಡಿದ್ದರು,
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 