ವಾರಿಶ್ ಪಠಾಣ್ ವಿಚಾರಣೆಗೆ ಗೈರು
ಕಲಬುರಗಿ, ಫೆ 29 : ಪ್ರಚೋದನಾಕಾರಿ ಭಾಷಣ ಮಾಡಿದ್ದ ಮಹಾರಾಷ್ಟ್ರ ಎಐಎಂಎಂ ಮಾಜಿ ಶಾಸಕ ವಾರಿಶ್ ಪಠಾಣ
ಕಾರಣಾಂತರಗಳಿಂದ ಇಂದು ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು ಪೊಲೀಸರಿಗೆ ತಿಳಿಸಿರುವ ಮಾಹಿತಿ ಲಭ್ಯವಾಗಿದೆ.
ಪ್ರಚೋದನಕಾರಿ ಭಾಷಣ ಮಾಡಿದ್ದ ಹಿನ್ನೆಲೆಯಲ್ಲಿ ವಾರಿಶ್ ಪಠಾಣ್ ವಿರುದ್ಧ ಕಲಬುರಗಿ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದರು.
ಫೆ.29 ರಂದು ಖುದ್ದಾಗಿ ಠಾಣೆಗೆ ಬಂದು ವಿಚಾರಣೆಗೆ ಹಾಜರಾಗುವಂತೆ ವಾರಿಶ್ ತಿಳಿಸಿದ್ದರು. ಆದರೆ, ಸದ್ಯ ಕಾರಣಾಂತರಗಳಿಂದ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ. ಕೆಲ ದಿನಗಳ ನಂತರ ವಿಚಾರಣೆಗೆ ಹಾಜರಾಗುವುದಾಗಿ ಅವರು ಪೊಲೀಸರಿಗೆ ತಿಳಿಸಿದ್ದಾರೆ.
ಹೀಗಾಗಿ ಕೆಲದಿನಗಳ ನಂತರ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ಮತ್ತೊಂದು ನೋಟಿಸ್ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.
ಇದೇ ತಿಂಗಳ 15ರಂದು ಕಲಬುರಗಿ ನಗರದ ಪೀರ್ ಬಂಗಾಲಿ ಮೈದಾನದಲ್ಲಿ ಸಿಎಎ, ಎನ್ ಆರ್ ಸಿ ವಿರೋಧಿ ಸಭೆಯಲ್ಲಿ ವಾರಿಶ್ ಪಠಾಣ್, 15 ಕೋಟಿ ಮುಸ್ಲಿಮರು 100 ಕೋಟಿ ಹಿಂದೂಗಳ ಮೇಲೆ ಭಾರಿ ಪ್ರಭಾವ ಬೀರಲಿದ್ದಾರೆ ಎಂದು ಪ್ರಚೋದಾನಾತ್ಮಕ ಭಾಷಣ ನೀಡಿದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 