ರಾಜ್ಯಾದ್ಯಂತ ಜಸ್ಟಿಸ್ ಫಾರ್ ಸ್ವಾತಿ ಅಭಿಯಾನ ಆರಂಭದ ಎಚ್ಚರಿಕೆ
Warning for the start of the Justice for Swati campaign across the state
ಕೊಲೆ ಆರೋಪಿಗಳನ್ನೆಲ್ಲಾ ಬಂಧಿಸಿ ಶೀಘ್ರ ಜೈಲಿಗೆ ಅಟ್ಟದಿದ್ದರೆ
ರಾಣೇಬೆನ್ನೂರು 15 : ರಟ್ಟಿಹಳ್ಳಿ ತಾಲೂಕಿನ ಮಾಸೂರು ಗ್ರಾಮದ ಸ್ವಾತಿ ರಮೇಶ ಬ್ಯಾಡಗಿ (22) ಎಂಬ ಯುವತಿಯ ಶವ ರಾಣೇಬೆನ್ನೂರು ತಾಲೂಕಿನ ಪತ್ತೆಪುರ ಗ್ರಾಮದ ತುಂಗಭದ್ರಾ ನದಿಯಲ್ಲಿ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಾಚಾರ ಮತ್ತು ಕೊಲೆಗೆ ಸಂಬಂಧಿಸಿದ ಬಗ್ಗೆ ಸಾರ್ವಜನಿಕರಲ್ಲಿ ಸಂಶಯ ಮೂಡಿದ್ದು ಈಗಾಗಲೆ ಈ ಪ್ರಕರಣದಲ್ಲಿ ಪೊಲೀಸರು ಒರ್ವ ವ್ಯಕ್ತಿಯನ್ನು ಬಂಧಿಸಿರುವುದು ತಿಳಿದು ಬಂದಿದ್ದು ಇನ್ನುಳಿದ ಎಲ್ಲಾ ಆರೋಪಿಗಳನ್ನು ಬಂಧಿಸಿ ಜೈಲಿಗೆ ಅಟ್ಟಿ ಆಕೆಯ ಸಾವಿಗೆ ನ್ಯಾಯ ಕೊಡದಿದ್ದರೆ ರಾಜ್ಯಾದ್ಯಂತ ‘ಜಸ್ಟಿಸ್ ಫಾರ್ ಸ್ವಾತಿ’ ಅಭಿಯಾನ ಆರಂಭಿಸಲಾಗುವುದೆಂದು ರೈತ ಮುಖಂಡ ರವೀಂದ್ರಗೌಡ ಎಫ್. ಪಾಟೀಲ ಸರ್ಕಾರ ಮತ್ತು ಪೊಲೀಸ್ ಇಲಾಖೆಗೆ ಎಚ್ಚರಿಸಿದ್ದಾರೆ.
ದೂರದ ಧರ್ಮಸ್ಥಳದಲ್ಲಿ ನಡೆದ ಸೌಜನ್ಯಳ ಸಾವಿನ ಪ್ರಕರಣಕ್ಕೆ ನ್ಯಾಯ ಕೊಡಿಸಲು ಹೋರಾಡುವ ಪ್ರಜ್ಞಾವಂತರು ಈ ಅಮಾಯಕ ಮುಗ್ದ ಸ್ವಾತಿಯ ಸಾವಿಗೆ ನ್ಯಾಯ ಏಕೆ ಕೇಳಬಾರದು ಎಂದು ಪ್ರಶ್ನಿಸಿರುವ ಪಾಟೀಲರು ಈ ಬಗ್ಗೆ ಸರ್ಕಾರ ಮತ್ತು ಗೃಹಮಂತ್ರಿಗಳಿಗೆ ತುರ್ತು ಈ ಮೇಲ್ ಸಂದೇಶ ರವಾನಿಸಿ ಎಚ್ಚರಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 