ರಾಜ್ಯಾದ್ಯಂತ ಜಸ್ಟಿಸ್ ಫಾರ್ ಸ್ವಾತಿ ಅಭಿಯಾನ ಆರಂಭದ ಎಚ್ಚರಿಕೆ
Warning for the start of the Justice for Swati campaign across the state
ಕೊಲೆ ಆರೋಪಿಗಳನ್ನೆಲ್ಲಾ ಬಂಧಿಸಿ ಶೀಘ್ರ ಜೈಲಿಗೆ ಅಟ್ಟದಿದ್ದರೆ
ರಾಣೇಬೆನ್ನೂರು 15 : ರಟ್ಟಿಹಳ್ಳಿ ತಾಲೂಕಿನ ಮಾಸೂರು ಗ್ರಾಮದ ಸ್ವಾತಿ ರಮೇಶ ಬ್ಯಾಡಗಿ (22) ಎಂಬ ಯುವತಿಯ ಶವ ರಾಣೇಬೆನ್ನೂರು ತಾಲೂಕಿನ ಪತ್ತೆಪುರ ಗ್ರಾಮದ ತುಂಗಭದ್ರಾ ನದಿಯಲ್ಲಿ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಾಚಾರ ಮತ್ತು ಕೊಲೆಗೆ ಸಂಬಂಧಿಸಿದ ಬಗ್ಗೆ ಸಾರ್ವಜನಿಕರಲ್ಲಿ ಸಂಶಯ ಮೂಡಿದ್ದು ಈಗಾಗಲೆ ಈ ಪ್ರಕರಣದಲ್ಲಿ ಪೊಲೀಸರು ಒರ್ವ ವ್ಯಕ್ತಿಯನ್ನು ಬಂಧಿಸಿರುವುದು ತಿಳಿದು ಬಂದಿದ್ದು ಇನ್ನುಳಿದ ಎಲ್ಲಾ ಆರೋಪಿಗಳನ್ನು ಬಂಧಿಸಿ ಜೈಲಿಗೆ ಅಟ್ಟಿ ಆಕೆಯ ಸಾವಿಗೆ ನ್ಯಾಯ ಕೊಡದಿದ್ದರೆ ರಾಜ್ಯಾದ್ಯಂತ ‘ಜಸ್ಟಿಸ್ ಫಾರ್ ಸ್ವಾತಿ’ ಅಭಿಯಾನ ಆರಂಭಿಸಲಾಗುವುದೆಂದು ರೈತ ಮುಖಂಡ ರವೀಂದ್ರಗೌಡ ಎಫ್. ಪಾಟೀಲ ಸರ್ಕಾರ ಮತ್ತು ಪೊಲೀಸ್ ಇಲಾಖೆಗೆ ಎಚ್ಚರಿಸಿದ್ದಾರೆ.
ದೂರದ ಧರ್ಮಸ್ಥಳದಲ್ಲಿ ನಡೆದ ಸೌಜನ್ಯಳ ಸಾವಿನ ಪ್ರಕರಣಕ್ಕೆ ನ್ಯಾಯ ಕೊಡಿಸಲು ಹೋರಾಡುವ ಪ್ರಜ್ಞಾವಂತರು ಈ ಅಮಾಯಕ ಮುಗ್ದ ಸ್ವಾತಿಯ ಸಾವಿಗೆ ನ್ಯಾಯ ಏಕೆ ಕೇಳಬಾರದು ಎಂದು ಪ್ರಶ್ನಿಸಿರುವ ಪಾಟೀಲರು ಈ ಬಗ್ಗೆ ಸರ್ಕಾರ ಮತ್ತು ಗೃಹಮಂತ್ರಿಗಳಿಗೆ ತುರ್ತು ಈ ಮೇಲ್ ಸಂದೇಶ ರವಾನಿಸಿ ಎಚ್ಚರಿಸಿದ್ದಾರೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 