ಕೂಡಲೇ ರೈತರಿಗೆ ಹಕ್ಕು ಪತ್ರ ಕೋಡದಿದ್ದರೆ ಆಗಸ್ಟ್ 10ರಿಂದ ಉಗ್ರ ಹೋರಾಟದ ಎಚ್ಚರಿಕೆ
Warning of an intense agitation starting August 10 if title deeds are not issued to farmers immediat
ಹೊಸಪೇಟೆ 01: ತಾಲ್ಲೂಕಿನ ಮರಿಯಮ್ಮನಹಳ್ಳಿ ಹೋಬಳಿ ವ್ಯಾಪ್ತಿಯ ದಣಾಯಕನಕೆರೆ, ನಂದಿಬಂಡಿ ಹಾಗೂ ನಾಗಲಾಪುರ ಕಂದಾಯ ಗ್ರಾಮಗಳ ರೈತರು ತುಂಗಭದ್ರಾ ಯೋಜನೆಯಿಂದ ಸ್ಥಳಾಂತರಗೊಂಡು ಸರ್ಕಾರ ತೋರಿಸಿದ ಜಾಗದಲ್ಲಿ ಕಳೆದ 73 ವರ್ಷಗಳಿಂದ ಕೃಷಿ ಮಾಡುತ್ತಿದ್ದರೂ ಇನ್ನೂ ಹಕ್ಕುಪತ್ರ (ಪಹಣಿ/ಮಾಲೀಕತ್ವ ದಾಖಲೆ) ದೊರೆತಿಲ್ಲ ಎಂದು ಆರೋಪಿಸಿದ್ದಾರೆ.
ಸರ್ಕಾರ ಪುನರ್ವಸತಿ ವೇಳೆ ನೀಡಿದ ಜಮೀನಿನಲ್ಲಿ ಹಲವು ದಶಕಗಳಿಂದ ಸಾಗುವಳಿ ನಡೆಸುತ್ತಿದ್ದರೂ, ಕೆಲವರಿಗೆ ಮಾತ್ರ ಹಕ್ಕುಪತ್ರ ದೊರೆತಿದ್ದು, ಇನ್ನೂ ಅನೇಕ ರೈತರು ದಾಖಲೆಗಳಿಂದ ವಂಚಿತರಾಗಿದ್ದಾರೆ ಎಂದು ರೈತ ಮುಖಂಡರು ತಿಳಿಸಿದ್ದಾರೆ.
ಪ್ರಸ್ತುತ ಈ ಜಮೀನುಗಳು ಮರಿಯಮ್ಮನಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಿಂದ 3 ಕಿ.ಮೀ. ಅಂತರದಲ್ಲಿವೆ ಎಂಬ ಕಾರಣ ನೀಡಿ ಹಕ್ಕುಪತ್ರ ನೀಡಲು ಸಾಧ್ಯವಿಲ್ಲ ಎಂದು ತಹಶೀಲ್ದಾರ್ ಕಚೇರಿಯಿಂದ ತಿಳಿಸಲಾಗುತ್ತಿದೆ.
ಆದರೆ, ರೈತರನ್ನು ಇಲ್ಲಿ ಪುನರ್ವಸತಿ ಮಾಡಿದ ಸಂದರ್ಭದಲ್ಲಿ ಮರಿಯಮ್ಮನಹಳ್ಳಿ ಗ್ರಾಮ ಪಂಚಾಯಿತಿಯೇ ಇರಲಿಲ್ಲ; ನಂತರ 2019ರಲ್ಲಿ ಪಟ್ಟಣ ಪಂಚಾಯಿತಿಯಾಗಿ ಪರಿವರ್ತನೆಯಾಗಿದೆ. ಈ ಕಾರಣವನ್ನು ಮುಂದಿಟ್ಟು ಹಕ್ಕುಪತ್ರ ನಿರಾಕರಿಸುವುದು ಸರಿಯಲ್ಲ ಎಂದು ರೈತರು ವಾದಿಸಿದ್ದಾರೆ.
ಈ ಕುರಿತು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಅನೇಕ ಬಾರಿ ಮನವಿ ಸಲ್ಲಿಸಲಾಗಿದ್ದು, ಸರ್ಕಾರಕ್ಕೆ ವರದಿ ಕಳುಹಿಸಿದ್ದರೆ ಅದರ ಪ್ರತಿಯನ್ನು ನೀಡುವಂತೆ ಆಗ್ರಹಿಸಿದ್ದಾರೆ. ಸರ್ಕಾರ ಹಾಗೂ ಜಿಲ್ಲಾಡಳಿತ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸದಿದ್ದರೆ ಆಗಸ್ಟ್ 10ರಂದು ವಿಜಯನಗರ ಜಿಲ್ಲಾಧಿಕಾರಿ ಕಚೇರಿ ಎದುರು ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಬಿ. ಗೋಣಿಬಸಪ್ಪ, ಜಿಲ್ಲಾ ಯುವ ಘಟಕದ ಕಾರ್ಯದರ್ಶಿ ಕೆ. ಯಮನೂರ್ಪ, ತಾಲೂಕು ಅಧ್ಯಕ್ಷ ಗಂಟೆ ಸೋಮಶೇಖರ್, ಗೌರವ ಅಧ್ಯಕ್ಷ ಹುಸೇನ್ ಸಾಬ್, ಹುಚ್ಚ ಸಾಬ್ ಇಬ್ರಾಹಿಂ ಸಾಹೇಬ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 