ಚೊಚ್ಚಲ ಪ್ರಶಸ್ತಿಯ ಕನಸಿನಕಲ್ಲಿ ವಾರಿಯರ್ಸ-ದಬಾಂಗ್
ಅಹಮದಾಬಾದ್, ಅ.17: ಏಳನೇ ಆವೃತ್ತಿ ಪ್ರೊ ಕಬಡ್ಡಿ ಟೂರ್ನಿ ರೋಚಕತೆ ಹುಟ್ಟಿಸಿದ್ದು, ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನ ಕಾಯ್ದುಕೊಂಡ ತಂಡಗಳು ಪ್ರಶಸ್ತಿ ಸುತ್ತಿನಲ್ಲಿ ಕಾದಾಟ ನಡೆಸಲಿವೆ. ಈ ಬಾರಿ ಬೆಂಗಾಲ್ ವಾರಿಯರ್ಸ್ ಹಾಗೂ ದಬಾಂಗ್ ದೆಹಲಿ ತಂಡಗಳು ಪ್ರಶಸ್ತಿ ಸುತ್ತಿನಲ್ಲಿ ಫೈಟ್ ನಡೆಸಲಿದ್ದು ಚೊಚ್ಚಲ ಪ್ರಶಸ್ತಿಯ ಕನಸಿನಲ್ಲಿದೆ. ಈ ಎರಡೂ ತಂಡಗಳು ಇದೇ ಮೊದಲ ಬಾರಿಗೆ ಟೂರ್ನಿಯ ಫೈನಲ್ ಗೆ ಅರ್ಹತೆ ಪಡೆದಿವೆ. ಈ ಮೂಲಕ ಈ ಬಾರಿ ಮತ್ತೊಂದು ಪಂದ್ಯ ಚಾಂಪಿಯನ್ ಪಟ್ಟ ಅಲಂಕರಿಸಲಿದೆ. ಬುಧವಾರ ನಡೆದ ಮೊದಲ ಸೆಮಿಫೈನಲ್ಸ್ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ತಂಡ 38-44 ರಿಂದ ಮಣಿಸಿದ ದಬಾಂಗ್ ದೆಹಲಿ ಅಂತಿಮ ಕಾದಟಕ್ಕೆ ಅರ್ಹತೆ ಪಡೆಯಿತು. ಇನ್ನೊಂದು ಪಂದ್ಯದಲ್ಲಿ ಬೆಂಗಾಲ್ 37-35 ರಿಂದ ಯು-ಮುಂಬಾ ತಂಡವನ್ನು ಮಣಿಸಿತು. ಬೆಂಗಾಲ್ ವಾರಿಯರ್ಸ್ 2016, 2017, 2018ರಲ್ಲಿ ನಾಕೌಟ್ ಹಂತ ಪ್ರವೇಶಿಸಿತ್ತು. ದಬಾಂಗ್ ಸತತ ಎರಡು ಬಾರಿ ನಾಕೌಟ್ ಪ್ರವೇಶಿಸಿದೆ. ಉಭಯ ತಂಡಗಳ ಟ್ರೋಫಿಗೆ ಮುತ್ತಿಡುವ ಕನಸು ಕಾಣುತ್ತಿದ್ದು, ಯಾವ ತಂಡ ಪ್ರೊ ಕಬಡ್ಡಿ ಟೂರ್ನಿಯ ಚಾಂಪಿಯನ್ ಎಂಬ ಹಣೆ ಪಟ್ಟೆ ತನ್ನದಾಗಿಸಿಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 