ಕೊಡಗಿನಲ್ಲಿ ಇಳಿಯುತ್ತಿದೆ ನೀರಿನ ಪ್ರವಾಹ; ಹರಿಯುತ್ತಿದೆ ಸಹಾಯದ ಪ್ರವಾಹ ಭರದಿಂದ ಸಾಗಿದೆ ಪರಿಹಾರ ಕಾರ್ಯ
ದಕ್ಷಿಣದ ಕಾಶ್ಮೀರ, ಭೂಲೋಕದ ಪ್ರಕೃತಿ ಸ್ವರ್ಗ ಎಂದು ಹೆಸರಾಗಿದ್ದ ಕೊಡಗು ವರುಣನ ಅಬ್ಬರ, ಪ್ರವಾಹಕ್ಕೆ ಸಿಲುಕಿ ನಲುಗಿ ಹೋಗಿದೆ. ಇದು ನಿಜಕ್ಕೂ ಕೊಡಗು, ಮಡಿಕೇರಿಯಾ, ಕುಶಾಲನಗರವಾ ಎಂದು ಅಚ್ಚರಿಪಡುವ ರೀತಿಯಲ್ಲಿ ಹಾಳಾಗಿದೆ ಹೋಗಿದೆ.
ಮಳೆಗೆ ನೂರಾರು ಮನೆಗಳು, ವಿದ್ಯುತ್ ಕಂಬಗಳು, ರಸ್ತೆಗಳು, ಸೇತುವೆಗಳು, ಘಾಟಿಯ ಗುಡ್ಡ ಕುಸಿದು ಕೊಚ್ಚಿ ಹೋಗದೆ. ವಿವಿಧ ಪರಿಹಾರ ಕೇಂದ್ರದಲ್ಲಿ ಸುಮಾರು 7 ಸಾವಿರ ಮಂದಿ ಆಶ್ರಯ ಪಡೆದಿದ್ದಾರೆ. ಅಲ್ಲಿ ಒಬ್ಬೊಬ್ಬರದ್ದು ಒಂದೊಂದು ಡಿಆರ್ ಎಫ್, ಗೃಹರಕ್ಷಕ ದಳ, ಪೊಲೀಸ್ ಇಲಾಖೆ ಸಹಿತ ಸರಕಾರಿ ರಕ್ಷಣಾ ತಂಡಗಳು ಸಾರ್ವಜನಿಕರ ಸಹಕಾರದಲ್ಲಿ ಅಹೋರಾತ್ರಿ ರಕ್ಷಣಾ ಕಾರ್ಯದಲ್ಲಿ ತೊಡಗಿ ನೂರಾರು ಜೀವಗಳನ್ನು ಉಳಿಸಿದ್ದಾರೆ.
ಮಡಿಕೇರಿಯ ತಂತಿಪಾಲದಲ್ಲಿ ಎನ್ ಡಿಆರ್ ಎಫ್ ಸಿಬ್ಬಂದಿಯೊಬ್ಬರು ಜೀವದ ಹಂಗು ತೊರೆದು 2 ತಿಂಗಳ ಮಗುವನ್ನು ರಕ್ಷಿಸಿರುವುದು, ಅಜ್ಜಿ, ಮಹಿಳೆಯರು, ಮಕ್ಕಳು, ವಿಕಲಚೇತನರನ್ನು ರಕ್ಷಿಸುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಇದೀಗ ಮಳೆಯ ಅಬ್ಬರ ನಿಂತಿದೆ..ಯುದ್ದೋಪಾದಿಯಲ್ಲಿ ಕಾಯರ್ಾಚರಣೆ ನಡೆಯುತ್ತಿದೆ. ಆದರೆ ತಮ್ಮ ಕಣ್ಣೆದುರೇ ಮನೆ, ತೋಟ ನಾಶವಾಗುವ ಮೂಲಕ ಇಡೀ ಬದುಕೇ ಬೀದಿಗೆ ಬಿದ್ದಂತಾಗಿದೆ. ಕೆಲವು ಸಣ್ಣ ಪುಟ್ಟ ಗುಡ್ಡದ ಮೇಲಿನ ಮನೆಗಳು ನಾಮಾವಶೇಷವಾಗಿದೆ.
ಮಳೆ, ಪ್ರವಾಹ ಇಳಿದ ಹಿನ್ನೆಲೆಯಲ್ಲಿ ಜನರು ಸ್ವಲ್ಪ ನಿಟ್ಟುಸಿರು ಬಿಡುವಂತಾಗಿದ್ದು ನಿಧಾನಕ್ಕೆ ತಮ್ಮ, ತಮ್ಮ ಮನೆ, ಜಾಗದತ್ತ ಹೆಜ್ಚೆ ಹಾಕುತ್ತಿದ್ದಾರೆ. ಆದರೆ ಅಲ್ಲಿ ಉಳಿದಿರುವುದು ಈಗ ಅವಶೇಷಗಳು ಮಾತ್ರ, ತಾವು ಹಲವಾರು ವರ್ಷಗಳಿಂದ ಬದುಕಿ ಬಾಳಿದ್ದ ಮನೆ, ಪರಿಸರ, ಕಟ್ಟಿಕೊಂಡ ಕನಸುಗಳೆಲ್ಲಾ ಕೊಚ್ಚಿಕೊಂಡು ಹೋಗಿದೆ.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 