ಜಲ ಜೀವನ್ ಮಿಷನ್ ಯೋಜನೆ: 15 ಲಕ್ಷ ಮನೆಗಳಿಗೆ ನಲ್ಲಿ ನೀರಿನ ಸಂಪರ್ಕದ ಗುರಿ
ಬೆಂಗಳೂರು, ಮೇ 20, ಭಾರತ ಸರ್ಕಾರದ ಜಲ ಜೀವನ್ ಮಿಷನ್ ಯೋಜನೆಯ ಅನುಷ್ಠಾನದ ಕುರಿತಂತೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರೊಂದಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬುಧವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದರು.ಜಲ ಜೀವನ್ ಮಿಷನ್ ಯೋಜನೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ತಲಾ ಶೇ. 50ರ ಅನುದಾನದೊಂದಿಗೆ ಜಾರಿಗೊಳಿಸಲಾಗುತ್ತಿದ್ದು, ರಾಜ್ಯಕ್ಕೆ 1150 ಕೋಟಿ ರೂ. ಅನುದಾನ ಮಂಜೂರಾಗಿದೆ.
ರಾಜ್ಯದಲ್ಲಿ 15 ಲಕ್ಷ ಕುಟುಂಬಗಳಿಗೆ ನಲ್ಲಿ ನೀರು ಸಂಪರ್ಕ ಜೋಡಿಸುವ ಗುರಿ ನಿಗದಿ ಪಡಿಸಲಾಗಿದ್ದು, ಮುಂದಿನ ಮೂರು ವರ್ಷದಲ್ಲಿ ಈ ಗುರಿ ಸಾಧಿಸಲಾಗುವುದು ಎಂದು ಮುಖ್ಯಮಂತ್ರಿಯವರು ಮಾಹಿತಿ ನೀಡಿದರು. ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಮಾತನಾಡಿ, ಜಲ ಶಕ್ತಿ ಮಿಷನ್ ಯೋಜನೆಗೆ ಅನುದಾನದ ಕೊರತೆ ಇಲ್ಲ. ಉದ್ಯೋಗ ಖಾತರಿ ಯೋಜನೆ ಮತ್ತು 15ನೇ ಹಣಕಾಸು ಆಯೋಗದ ಅನುದಾನವನ್ನೂ ಸಂಯೋಜಿಸಿ, 2022-23 ರೊಳಗೆ ರಾಜ್ಯದಾದ್ಯಂತ ಈ ಯೋಜನೆಯನ್ನು ಜಾರಿಗೊಳಿಸುವಂತೆ ಸಲಹೆ ನೀಡಿದರು. ಪ್ರಾರಂಭದಲ್ಲಿ ಈಗಾಗಲೇ ಜಲ ಮೂಲ ಲಭ್ಯವಿರುವ, ಗ್ರಾಮಗಳಲ್ಲಿ ಈ ಯೋಜನೆ ಅನುಷ್ಠಾನಗೊಳಿಸುವ ಕುರಿತು ತೀರ್ಮಾನಿಸಲಾಯಿತು.ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ..ಎಂ. ವಿಜಯಭಾಸ್ಕರ್, ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ ಮೊದಲಾದವರು ಸಭೆಯಲ್ಲಿ ಭಾಗವಹಿಸಿದ್ದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 