ತಿಕೋಟಾ ತಾಲೂಕಿನ ಕಾಲುವೆಗಳಿಗೆ ನೀರು ಹರಿವು

ತಿಕೋಟಾ ತಾಲೂಕಿನ ಕಾಲುವೆಗಳಿಗೆ ನೀರು ಹರಿವು Water flow into the canals of Tikota taluk

ವಿಜಯಪುರ 11: ಮಳೆಯ ಅಭಾವದ ಹಿನ್ನಲೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆ ತಪ್ಪಿಸಲು ಮುನ್ನೆಚ್ಚರಿಕೆ ಕ್ರಮವಾಗಿ ತುಬಚಿ-ಬಬಲೇಶ್ವರ ಯೋಜನೆಯಡಿ ತಿಕೋಟಾ ತಾಲೂಕಿನ ಕಾಲುವೆಗಳಿಗೆ ಇಂದಿನಿಂದ ನೀರನ್ನು ಹರಿಸಲಾಗುತ್ತಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಅಗತ್ಯಕ್ಕೆ ಮೊದಲ ಆದ್ಯತೆ ನೀಡುವ ಉದ್ದೇಶದಿಂದ ಈ ನೀರನ್ನು ಹರಿಸಲಾಗುತ್ತಿದೆ. ಕೃಷಿ ಚಟುವಟಿಕೆಗಳಿಗೆ ನೀರನ್ನು ಬಳಸಬಾರದು ಎಂದು ಸಚಿವರು ರೈತರಿಗೆ ಮನವಿ ಮಾಡಿದ್ದಾರೆ.