ತುಂಬಿದ ಘಟಪ್ರಭಾ ನದಿಗೆ ನೀರು: ಢವಳೇಶ್ವರ ಸೇತುವೆ ಮುಳುಗಡೆ
Water in Ghataprabha River overflows: Dhavaleshwar Bridge submerged

ಮಹಾಲಿಂಗಪುರ 20: ಘಟಪ್ರಭಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಸಮೀಪದ ಢವಳೇಶ್ವರ ಸೇತುವೆ ಮಂಗಳವಾರ ಸಂಜೆ ಜಲಾವೃತಗೊಂಡಿದೆ.
ಮಹಾರಾಷ್ಟ್ರದ ಅಂಬೋಲಿ ಘಟ್ಟ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಘಟಪ್ರಭಾ ನದಿ ಮೂಲಕ ಹಿಡಕಲ್ ಜಲಾಶಯಕ್ಕೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರಲಾರಂಭಿಸಿದೆ.
ನೀರಿನ ತೀವ್ರತೆ ಹಿರಣ್ಯಕೇಶಿ 56220 ಕ್ಯೂಸೆಕ್ಸ್ ಒಳ ಹರಿವು, ಮಾಕಂರ್ಡೆಯ 6900 ಕ್ಯೂಸೆಕ್ಸ್ ಎಲ್ಲಾ ಸೇರಿ ಘಟಪ್ರಭಾ ನದಿ ನೀರಿನ ಹರಿವು 63120 ಕ್ಯೂಸೆಕ್ಸ್ ಹರಿಯುತ್ತಿದ್ದು ಅಪಾಯಮಟ್ಟವನ್ನು ತೋರಿಸುತ್ತಿದೆ.ಢವಳೇಶ್ವರ ಸೇತುವೆ ಸೇರಿದಂತೆ ನಂದಗಾವ-ಅವರಾದಿ, ಸೇತುವೆಗಳು ಜಲಾವೃತಗೊಂಡಿವೆ. ಸೇತುವೆ ಸಂಪರ್ಕ ಹೊಂದಿದ ಹತ್ತಾರು ಗ್ರಾಮಗಳ ಗ್ರಾಮಸ್ಥರು ಪ್ರವಾಹ ಭೀತಿ ಎದುರಿಸುತ್ತಿದ್ದಾರೆ.
ಪ್ರವಾಹಕ್ಕೆ ತುತ್ತಾಗಬಹುದಾದ ಗ್ರಾಮಸ್ಥರು ಸುರಕ್ಷಿತ ಸ್ಥಳಕ್ಕೆ ತೆರಳಬೇಕು ಎಂದು ಅಧಿಕಾರಿಗಳು ಈಗಾಗಲೇ ಸೂಚನೆ ನೀಡಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 