ಕೃಷ್ಣಾ ಹಾಗೂ ಉಪನದಿಗಳಿಗೆ ನೀರಿನ ಮಟ್ಟ ಏರಿಕೆ: ಮಲಿಕವಾಡ ದತ್ತವಾಡ ಬ್ರಿಜ್ ಮುಳುಗಡೆ
Water level rises in Krishna and tributaries: Malikwad-Dattawad bridge submerged
ಮಾಂಜರಿ 27: ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಹಾಗೂ ಚಿಕ್ಕೋಡಿ, ನಿಪ್ಪಾಣಿ ತಾಲೂಕಿನಲ್ಲಿ ನಿರಂತವಾಗಿ ಸುರುಯುತ್ತಿರುವ ಮಳೆಯಿಂದಾಗಿ ಕೃಷ್ಣಾ ಹಾಗೂ ಉಪನದಿಗಳಿಗೆ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಪರಿಣಾಮ ತಾಲೂಕಿನ 8 ಕೆಳಹಂತದ ಸೇತುವೆಗಳು ಜಲಾವೃತಗೊಂಡಿವೆ.ಮಹಾರಾಷ್ಟ್ರದ ಸಾಂಗಲಿ, ಕೊಲ್ಲಾಪೂರ ಸೇರಿದಂತೆ ವಿವಿಧ ಭಾಗಗಳಲ್ಲಿ ಹಾಗೂ ಚಿಕ್ಕೋಡಿ, ನಿಪ್ಪಾಣಿ ತಾಲೂಕಿನಲ್ಲಿ ಕಳೆದ 8 ದಿನಗಳಿಂದ ನಿರಂತರವಾಗಿ ಸುರುಯುತ್ತಿರುವ ಮಳೆಯಿಂದಾಗಿ ಕೃಷ್ಣಾ ವೇದ ಗಂಗಾ, ದೂಧಗಂಗಾ ನದಿಗಳಿಗೆ ಭಾರೀ ಪ್ರಮಾಣದಲ್ಲಿ ನೀರು ಏರಿಕೆಯಾಗುತ್ತಿದೆ. ಪರಿಣಾಮ ಇವತ್ತು ಚಿಕ್ಕೋಡಿ ತಾಲೂಕಿನ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಯಡೂರ-ಕಲ್ಲೋಳ ಬ್ಯಾರೇಜ್, ಮಾಂಜರಿ ಸೌದತ್ತಿ ಹಾಗೂ ದೂಧಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಮಲಿಕವಾಡ ದತ್ತವಾಡ ಬ್ರಿಜ್ ಮುಳಗಡೆಯಾಗಿದೆ.
ಚಿಕ್ಕೋಡಿ, ನಿಪ್ಪಾಣಿ ತಾಲೂಕಿನ ಒಟ್ಟು 8 ಸೇತುವೆಗಳು ಜಲಾವೃತಗೊಂಡಿವೆ. ನದೀತೀರದಲ್ಲಿ ನೀರಿನ ಮಟ್ಟಏರಿಕೆಯಾಗುತ್ತಿದೆ. ಮಹಾರಾಷ್ಟ್ರದ ರಾಜಾಪೂರ ಬ್ಯಾರೇಜನಿಂದ 22,250 ಕ್ಯೂಸೆಕ್, ದೂಧಗಂಗಾ ನದಿಯಿಂದ 10,910 ಕ್ಯೂಸೆಕನಷ್ಟು ನೀರು ಹರಿದು ಬರುತ್ತಿದೆ. ಕಲ್ಲೋಳ ಬ್ಯಾರೇಜ್ ನಿಂದ ಒಟ್ಟು 33,160 ಕ್ಯೂಸೆ ಕನಷ್ಟು ನೀರು ಬರುತ್ತಿದೆ.ನದೀತೀರದ ಜನರಲ್ಲಿ ಮತ್ತೆ ಪ್ರವಾಹದ ಭೀತಿ ಎದುರಾಗಿದೆ. ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಚಿಕ್ಕೋಡಿ ತಾಲೂಕಿನ ಯಡೂರು ಕಲ್ಲೋಳ್ ಬಾಂಧಾರ ಮುಳುಗಡೆಯಾಗಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 