ಮೂಲಭೂತ ಸೌಲಭ್ಯ ಒದಗಿಸಲು ಬದ್ಧರಾಗಿದ್ಧೇವೆ: ಬಾನುವಳ್ಳಿ.
ರಾಣೇಬೆನ್ನೂರು17: ಗ್ರಾಮೀಣ ಪ್ರದೇಶಗಳಲ್ಲಿನ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಸರಕಾರವು ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದು, ಈ ಹಿನ್ನಲೆಯಲ್ಲಿ ಕಾಕೋಳ ಜಿಪಂ ವ್ಯಾಪ್ತಿಯಲ್ಲಿನ ಹಳ್ಳಿಗಳ ರಸ್ತೆ ಮತ್ತಿತರ ಅಭಿವೃದ್ದಿ ಕಾಮಗಾರಿಗಳಿಗಾಗಿ ವಿಶೇಷ ಯೋಜನೆ ಅಡಿಯಲ್ಲಿ 5 ಕೋಟಿ ರೂ ಮಂಜೂರಾಗಿದೆ ಎಂದು ಜಿಪಂ ಸದಸ್ಯ ಏಕನಾಥ ಬಾನುವಳ್ಳಿ ಹೇಳಿದರು.
ಸೋಮವಾರ ತಾಲೂಕಿನ ಬೇವಿನಹಳ್ಳಿಯಲ್ಲಿ 2019-2020ನೇ ಸಾಲಿನ ನೆರೆಹಾವಳಿಯ 50-50 ಯೋಜನೆಯ ಅಡಿಯಲ್ಲಿನ ಮೈದೂರು ಕ್ರಾಸನಿಂದ ಬೇವಿನಹಳ್ಳಿಯವರೆಗೆ ಅಂದಾಜು 26.50 ಲಕ್ಷ ರು ವೆಚ್ಚದ ರಸ್ತೆ ಡಾಂಭರೀಕರಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ಗ್ರಾಮಗಳ ಸವರ್ಾಂಗೀಣ ಅಭಿವೃದ್ದಿಯ ಜೊತೆಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಈಗಾಗಲೇ ಅಗತ್ಯ ಕ್ರಮ ಕೈಗೊಂಡಿರುವೆ. ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಮಾಡಲು ಮುಂದಾಗಬೇಕು. ನಾಗರೀಕರು ಸಹ ಅಭಿವೃದ್ದಿ
ಗೆ ಕೈಜೋಡಿಸಬೇಕು ಎಂದರು.
ಎಇಇ ರಾಮಣ್ಣ ಬಜಾರಿ, ಬಸವರಾಜ ಮಾಳಗಿ, ಓಂಕಾರ ಪಾಂಚಾಳ, ಸೈಯದ ಮುಜೀದ, ಹನುಮಪ್ಪ ತೋಪೀನ, ಫಕ್ಕಿರಗೌಡ ಪಾಟೀಲ, ಕರಬಸಪ್ಪ ಭಾವಗೌಡ್ರ ಸೇರಿದಂತೆ ಗ್ರಾಮಸ್ಥರು, ಅಧಿಕಾರಿಗಳು ಮತ್ತಿತರರು ಇದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 