ಮೂಲಭೂತ ಸೌಲಭ್ಯ ಒದಗಿಸಲು ಬದ್ಧರಾಗಿದ್ಧೇವೆ: ಬಾನುವಳ್ಳಿ.
ರಾಣೇಬೆನ್ನೂರು17: ಗ್ರಾಮೀಣ ಪ್ರದೇಶಗಳಲ್ಲಿನ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಸರಕಾರವು ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದು, ಈ ಹಿನ್ನಲೆಯಲ್ಲಿ ಕಾಕೋಳ ಜಿಪಂ ವ್ಯಾಪ್ತಿಯಲ್ಲಿನ ಹಳ್ಳಿಗಳ ರಸ್ತೆ ಮತ್ತಿತರ ಅಭಿವೃದ್ದಿ ಕಾಮಗಾರಿಗಳಿಗಾಗಿ ವಿಶೇಷ ಯೋಜನೆ ಅಡಿಯಲ್ಲಿ 5 ಕೋಟಿ ರೂ ಮಂಜೂರಾಗಿದೆ ಎಂದು ಜಿಪಂ ಸದಸ್ಯ ಏಕನಾಥ ಬಾನುವಳ್ಳಿ ಹೇಳಿದರು.
ಸೋಮವಾರ ತಾಲೂಕಿನ ಬೇವಿನಹಳ್ಳಿಯಲ್ಲಿ 2019-2020ನೇ ಸಾಲಿನ ನೆರೆಹಾವಳಿಯ 50-50 ಯೋಜನೆಯ ಅಡಿಯಲ್ಲಿನ ಮೈದೂರು ಕ್ರಾಸನಿಂದ ಬೇವಿನಹಳ್ಳಿಯವರೆಗೆ ಅಂದಾಜು 26.50 ಲಕ್ಷ ರು ವೆಚ್ಚದ ರಸ್ತೆ ಡಾಂಭರೀಕರಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ಗ್ರಾಮಗಳ ಸವರ್ಾಂಗೀಣ ಅಭಿವೃದ್ದಿಯ ಜೊತೆಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಈಗಾಗಲೇ ಅಗತ್ಯ ಕ್ರಮ ಕೈಗೊಂಡಿರುವೆ. ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಮಾಡಲು ಮುಂದಾಗಬೇಕು. ನಾಗರೀಕರು ಸಹ ಅಭಿವೃದ್ದಿ
ಗೆ ಕೈಜೋಡಿಸಬೇಕು ಎಂದರು.
ಎಇಇ ರಾಮಣ್ಣ ಬಜಾರಿ, ಬಸವರಾಜ ಮಾಳಗಿ, ಓಂಕಾರ ಪಾಂಚಾಳ, ಸೈಯದ ಮುಜೀದ, ಹನುಮಪ್ಪ ತೋಪೀನ, ಫಕ್ಕಿರಗೌಡ ಪಾಟೀಲ, ಕರಬಸಪ್ಪ ಭಾವಗೌಡ್ರ ಸೇರಿದಂತೆ ಗ್ರಾಮಸ್ಥರು, ಅಧಿಕಾರಿಗಳು ಮತ್ತಿತರರು ಇದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 