ಜಯಗಳಿಸುವ ಸಂಪೂರ್ಣ ವಿಶ್ವಾಸ ನಮಗಿದೆ : ಬಾಬಾಸಾಹೇಬ ಪಾಟೀಲ
We are fully confident of victory: Babasaheb Patil
ಜಯಗಳಿಸುವ ಸಂಪೂರ್ಣ ವಿಶ್ವಾಸ ನಮಗಿದೆ : ಬಾಬಾಸಾಹೇಬ ಪಾಟೀಲ
ಬೆಳಗಾವಿ 10: ಪ್ರತಿಷ್ಠಿತ ದಿ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ ಗೆ ಅ. 19 ರಂದು ಚುನಾವಣೆ ಪ್ರಯುಕ್ತ ನಮ್ಮ ಸಹೋದರ ನಾನಾಸಾಹೇಬ ಪಾಟೀಲ ಅವರನ್ನು ಕಿತ್ತೂರು ತಾಲೂಕಿನ ಸಹಕಾರಿ ಸಂಘಗಳ ವತಿಯಿಂದ ನಿರ್ದೇಶಕರ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದು, ನಮ್ಮ ಕುಟುಂಬ ಮೊದಲಿನಿಂದಲೂ ಸಹಕಾರಿ ರಂಘದಲ್ಲಿ ಕಾರ್ಯ ಮಾಡಿದ್ದು, ಸಹೋದರ ನಾನಾಸಾಹೇಬ ಪಾಟೀಲ ಪಿಕೆಪಿಎಸ್ ಅಧ್ಯಕ್ಷರಾಗಿ, ಅನೇಕ ಸಂಘಗಳ ಸ್ಥಾಪನೆ, ಬೆಂಬಲಿಗರ ಆಯ್ಕೆಯಲ್ಲಿ ಕೆಲಸ ಮಾಡಿದ್ದು ನಮ್ಮನ್ನು ಸಹಕಾರಿ ಸಂಘದ ಪ್ರತಿನಿಧಿಗಳು ಬೆಂಬಲಿಸಲಿದ್ದಾರೆ. ಜೊತೆಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಸಂಪೂರ್ಣ ಬೆಂಬಲ ನೀಡಿದ್ದಾರೆ. ವಿರೋಧಿಗಳ ಬಗ್ಗೆ ಹೇಳುವದು ಬೇಡ, ಬಾಲಚಂದ್ರ ಜಾರಕಿಹೊಳಿ ಬಣದ ಬಗ್ಗೆ ಮಾತು ಬೇಡ ನಮ್ಮ ಆಯ್ಕೆ ಗೆಲುವಿನ ಕಡೆ ಎಂದು ಚನ್ನಮ್ಮನ ಕಿತ್ತೂರು ಶಾಸಕರಾದ ಬಾಬಾಸಾಹೇಬ ಪಾಟೀಲ ಹೇಳಿದರು.
ಅವರು ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ ಪ್ರಧಾನ ಕಚೇರಿಯಲ್ಲಿ ಸಹೋದರ ನಾನಾಸಾಹೇಬ ಪಾಟೀಲ ಅವರು ಕಿತ್ತೂರು ತಾಲೂಕ ವತಿಯಿಂದ ಡಿಸಿಸಿ ನಿರ್ದೇಶಕ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿ ಪ್ರತೇಕ ಕಿತ್ತೂರು ತಾಲೂಕ ರಚನೆ ಆದ ಮೇಲೆ ನಾವು ನಿರ್ದೇಶಕ ಸ್ಥಾನಕ್ಕೆ ಸ್ಪರ್ಧೆ ಮಾಡ್ತಾ ಇದ್ದೇವೆ, ಬಾಲಚಂದ್ರ ಜಾರಕಿಹೊಳಿ ಬಣ ವಿರುದ್ಧ ಪ್ರಚಾರಕ್ಕೆ ಮಾಜಿ ಸಂಸದ ರಮೇಶ ಕತ್ತಿ ನಮಗೆ ಬೇಕಿಲ್ಲ. 60ಅ ಜನ ಜಮೀನು ಇಲ್ಲದವರು ಇದ್ದಾರೆ ಅವರೇನು ಮಾಡಬೇಕು, ಸರ್ಕಾರದ ಹಣ ರೈತರಿಗೆ ಬಡ್ಡಿ ರಹಿತವಾಗಿ ರೈತರಿಗೆ ತಲುಪಿಸಬೇಕು, ಪಿಕೆಪಿಎಸ್ ಗಳಲ್ಲಿ ಪರದರ್ಶಕತೆ ಇರಬೇಕು ಎಂದರು.
ಕಿತ್ತೂರು ಹಾಗೂ ಬೈಲಹೊಂಗಲ ತಾಲೂಕಿನ ಮುಖಂಡರು, ರೈತ ಮುಖಂಡರು, ಬೆಂಬಲಿಗರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 