ರುದ್ರಭೂಮಿ ಸಮಗ್ರ ಅಭಿವೃದ್ಧಿಗೆ ಸಂಕಲ್ಪ ಮಾಡಿದ್ದೇವೆ : ಕೇದಾರ್ಪ
We have resolved to comprehensively develop the cremation ground: Kedarappa
ಶಿಗ್ಗಾವಿ 01: ರುದ್ರಭೂಮಿಯು ಪ್ರತಿಯೊಬ್ಬರ ಜೀವನದ ಅಂತಿಮ ಪಯಣಕ್ಕೆ ಗೌರವಯುತ ವಿದಾಯ ನೀಡುವ ಪವಿತ್ರ ಸ್ಥಳವಾಗಿದ್ದು, ಅದರ ಸಮಗ್ರ ಅಭಿವೃದ್ಧಿಗೆ ಸಂಕಲ್ಪ ಮಾಡಿದ್ದೇವೆ ಎಂದು ರುದ್ರಭೂಮಿ ಸಮಿತಿ ಅಧ್ಯಕ್ಷ ಕೇದಾರ್ಪ ಬಗಾಡೆ ಹೇಳಿದರು. ಪಟ್ಟಣದ ಹೊರವಲದಲ್ಲಿರುವ ರುದ್ರಭೂಮಿಯಲ್ಲಿ ಹಸಿರು ಗಿಡಗಳನ್ನು ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಸ್ವಚ್ಛತೆ, ಹಸೀರೀಕರಣ ಹಾಗೂ ಸಾರ್ವಜನಿಕರಿಗೆ ಅಗತ್ಯವಿರುವ ಎಲ್ಲ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಸಮಿತಿಯು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಲಿದೆ ಎಂದರು. ಕಳೆದ ಕೆಲವು ವರ್ಷಗಳಲ್ಲಿ ರುದ್ರಭೂಮಿಯ ಅಭಿವೃದ್ಧಿಗೆ ಸಹಕರಿಸಿದ ದಾನಿಗಳು, ಸಮಾಜದ ಮುಖಂಡರನ್ನು ಸ್ಮರಿಸಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷ ಲಕ್ಷ್ಮಣ ಕುಂದಗೋಳ, ಕಾರ್ಯದರ್ಶಿ ನಾರಾಯಣ ಬಗಾಡೆ, ಸದಸ್ಯರಾದ ನಾಗರಾಜ ಬ್ರಹ್ಮಾವರ, ಸುರೇಶ್ ಮೂಳೆ, ರವಿ ಕಡೆಮನಿ, ಆನಂದ್ ದಾನಿ, ಮಾರುತಿ ರಾಯ್ಕರ, ಮಂಜುನಾಥ ಆಸ್ವಾಲೇಕರ, ಮಂಜುನಾಥ ಡಂಬಳ್, ಶಿವಪ್ಪ ದಾಸರ್, ಪಕೀರ್ಪ ಸುಲ್ತಾನವರ್ ಸೇರಿದಂತೆ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು. ರಾಘವೇಂದ್ರ ದೇಶಪಾಂಡೆ ಅವರು ಕಾರ್ಯಕ್ರಮ ನಿರ್ವಹಿಸಿದರು.
ಅಂಬೋಲಿ ಬಳಿ ಕಣಿವೆಗೆ ಬಿದ್ದು ಯುವಕ ದುರ್ಮರಣ : 5 ಗಂಟೆ ಕಾರ್ಯಾಚರಣೆ ಬಳಿಕ ಶವ ಪತ್ತೆ
ಸುತಗಟ್ಟಿ ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆ : ನಿಟ್ಟೂಸಿರು ಬಿಟ್ಟ ಗ್ರಾಮಸ್ಥರು
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ 