ಪರಿಸರ ಸ್ನೇಹಿ ಜೀವನ ಶೈಲಿಯನ್ನು ರೂಢಿಸಿಕೊಳ್ಳಬೇಕು: ಪ್ರೊ. ಪ್ರಕಾಶಗೌಡ

ಪರಿಸರ ಸ್ನೇಹಿ ಜೀವನ ಶೈಲಿಯನ್ನು ರೂಢಿಸಿಕೊಳ್ಳಬೇಕು: ಪ್ರೊ. ಪ್ರಕಾಶಗೌಡ We should adopt an eco-friendly lifestyle: Prof. Prakash Gowda

ಪರಿಸರ ಸ್ನೇಹಿ ಜೀವನ ಶೈಲಿಯನ್ನು ರೂಢಿಸಿಕೊಳ್ಳಬೇಕು: ಪ್ರೊ. ಪ್ರಕಾಶಗೌಡ 

ಕೊಪ್ಪಳ  05:  ಗವಿಸಿದ್ಧೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ಎನ್‌.ಸಿ.ಸಿ. ವಿಭಾಗದಿಂದ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಇರಕಲ್ಲಗಡಾದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಪ್ರಾಧ್ಯಾಪಕರಾದ ಪ್ರೊ. ಪ್ರಕಾಶಗೌಡ ಅವರು ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸುವ, ಪರಿಸರ ಸ್ನೇಹಿ ಜೀವನ ಶೈಲಿಯನ್ನು ರೂಢಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.  

ಈ ಕಾರ್ಯಕ್ರಮಯ ಆಯೋಜಕರಾದ ಎನ್‌.ಸಿ.ಸಿ. ವಿಭಾಗದ ಮುಖ್ಯಸ್ಥರಾದ ಮೇಜರ್ ದಯಾನಂದ ಸಾಳುಂಕೆ ಅವರು ಪರಿಸರ ದಿನಾಚರಣೆಯ ಐತಿಹಾಸಿಕ ಮಹತ್ವಗಳನ್ನು ಕುರಿತು ಮಾತನಾಡುತ್ತಾ, ‘ಪರಿಸರ ಉಳಿಸಿ-ಭವಿಷ್ಯ ರಕ್ಷಿಸಿ’ ಎಂಬ ನಂಬಿಕೆಯಿಂದ ಎಲ್ಲರೂ ಕೈ ಜೋಡಿಸೋಣ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು. 

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಚನ್ನಬಸವ ವಹಿಸಿದ್ದರು. ಕಾರ್ಯಕ್ರಮದಲ್ಲಿ ಐ.ಕ್ಯೂ.ಎ.ಸಿ. ಸಂಯೋಜಕರಾದ ಡಾ. ಅರುಣಕುಮಾರ ಮತ್ತು ಮಹಾವಿದ್ಯಾಲಯದ ಎಲ್ಲಾ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.