ಸಂತೋಷ, ಸುಂದರ ಮತ್ತು ನೆಮ್ಮದಿಯಿಂದ ಇರುವಂತೆ ನಮ್ಮ ಜೀವನ ನಡೆಸಬೇಕು: ಓಲೆಮಠದ ಆನಂದ ದೇವರು
We should live our lives in a way that is happy, beautiful and peaceful: Anand Deva of Olemath
ರಾಯಬಾಗ 17: ಜೀವನದಲ್ಲಿ ಯಾವುದೇ ಒತ್ತಡಕ್ಕೆ ಒಳಗಾಗದೇ ಸಂತೋಷ, ಸುಂದರ ಮತ್ತು ನೆಮ್ಮದಿಯಿಂದ ಇರುವಂತೆ ನಮ್ಮ ಜೀವನ ನಡೆಸಬೇಕು ಎಂದು ಜಮಖಂಡಿ ಓಲೆಮಠದ ಆನಂದ ದೇವರು ಹೇಳಿದರು.
ಬುಧವಾರ ಪಟ್ಟಣದ ಬಿ.ಎ.ಚೌಗುಲೆ ಶಿಕ್ಷಣ ಸಂಸ್ಥೆ ಆವರಣದಲ್ಲಿ ಹೀರಾಬಾಯಿ ಚೌಗುಲೆ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ 2025-26ನೇ ಸಾಲಿನ ಕಲಾ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ಪ್ರಥಮ ವರ್ಷ ವಿದ್ಯಾರ್ಥಿಗಳ ಸ್ವಾಗತ, ಸಾಂಸ್ಕೃತಿಕ, ಕ್ರೀಡೆ ಮತ್ತು ಎನ್.ಎಸ್.ಎಸ್ ಚಟುವಟಿಕೆಗಳ ಉದ್ಘಾಟನಾ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ನಮ್ಮ ಬದುಕನ್ನು ಕಟ್ಟುವ ಶಿಕ್ಷಕರಿಗೆ ಗೌರವ ನೀಡಿ, ಅವರ ಮಾರ್ಗದರ್ಶನದಲ್ಲಿ ಉನ್ನತ ಸಾಧನೆ ಮಾಡಬೇಕು.
ತಂದೆ, ತಾಯಿ, ಶಿಕ್ಷಕರು, ರೈತರು, ಸೈನಿಕರು ನಮ್ಮಗೆ ನಾಯಕರಾಗಬೇಕು ಎಂದು ಹೇಳಿದರು. ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪ್ರಥಮ ದರ್ಜೆ ಸಹಾಯಕ ಲಕ್ಷ್ಮಣ ಮಾಳಗಿ ಮಾತನಾಡಿದರು.ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಎಲ್.ಬಿ.ಚೌಗುಲೆ ಅಧ್ಯಕ್ಷತೆಯನ್ನು ವಹಿಸಿದ್ದರು. ಬೆಳಗಾವಿ ರಾಣಿ ಚನ್ನಮ್ಮ ವಿ.ವಿ ಸಿಸ್ಟಮ್ ಅಸಿಸ್ಟಂಟ್ ಸದಾಶಿವ ತೋರಿ, ಸಂಸ್ಥೆ ಕಾರ್ಯದರ್ಶಿ ವಿನಯ ಚೌಗುಲೆ, ಉಪನ್ಯಾಸಕರಾದ ಪಿ.ಡಿ.ಲಂಗೋಟೆ, ಶಿವಾಜಿ ಭೋಯಿ, ಕಾವೇರಿ ಪಾಟೀಲ, ಗಜಾನನ ಪೂಜಾರಿ, ಸಂತೋಷಕುಮಾರ ಲಮಾಣಿ, ಕುಮಾರ ಭಜಂತ್ರಿ, ಅಪ್ಪು ಕಾಂಬಳೆ, ಆಶಾ ಕಾಂಬಳೆ, ಸುನೀಲ ಕೋಳಿಗುಡ್ಡೆ, ಎಸ್.ಜಿ.ಶಿಂಧೆ, ರೋಹನ ವಗ್ಗರ, ಸುಮಿತ್ರಾ ಅಲಕನೂರೆ,ಪ್ರಾಚಾರ್ಯ ಎಸ್.ಎಸ್.ದಿಗ್ಗೆವಾಡಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಫೋಟೊ: 17 ರಾಯಬಾಗ 1ಫೋಟೊ ಶೀರ್ಷಿಕೆ: ರಾಯಬಾಗ: ಪಟ್ಟಣದ ಬಿ.ಎ.ಚೌಗುಲೆ ಶಿಕ್ಷಣ ಸಂಸ್ಥೆ ಆವರಣದಲ್ಲಿ ಹೀರಾಬಾಯಿ ಚೌಗುಲೆ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ 2025-26ನೇ ಸಾಲಿನ ಕಲಾ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ಪ್ರಥಮ ವರ್ಷ ವಿದ್ಯಾರ್ಥಿಗಳ ಸ್ವಾಗತ, ಸಾಂಸ್ಕೃತಿಕ, ಕ್ರೀಡೆ ಮತ್ತು ಎನ್.ಎಸ್.ಎಸ್ ಚಟುವಟಿಕೆಗಳನ್ನು ಗಣ್ಯರು ಉದ್ಘಾಟಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 