ಉತ್ತಮ ನಾಗರಿಕರಾಗಿ ದೇಶಸೇವೆ ಮಾಡಬೇಕು’ : ಶ್ರೀಧರ್ ನಾಡಿಗೇರ್
We should serve the country as good citizens': Sridhar Nadiger
ಉತ್ತಮ ನಾಗರಿಕರಾಗಿ ದೇಶಸೇವೆ ಮಾಡಬೇಕು’ : ಶ್ರೀಧರ್ ನಾಡಿಗೇರ್
ಧಾರವಾಡ 04; ‘ವಿದ್ಯಾರ್ಥಿಗಳು ನಿರಂತರ ಪರಿಶ್ರಮದಿಂದ ನಿಗದಿತ ಗುರಿ ತಲುಪಬೇಕು. ಉತ್ತಮ ನಾಗರಿಕರಾಗಿ ದೇಶಸೇವೆ ಮಾಡಬೇಕು’ ಎಂದು ಆರ್ಎಸ್ಎಸ್ನ ಕರ್ನಾಟಕ ಉತ್ತರ ಪ್ರಾಂತ ಪ್ರಚಾರಕ ಶ್ರೀಧರ್ ನಾಡಿಗೇರ್ ಹೇಳಿದರು. ನಗರದ ಕೆ.ಇ. ಬೋರ್ಡ್ ಪದವಿ ಪೂರ್ವ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಮಂಗಳವಾರ ನಡೆದ ವಿದ್ಯಾರ್ಥಿ ಒಕ್ಕೂಟ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆ ಸಮಾರೋಪ, ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದರು.
ಪ್ರಾಚಾರ್ಯ ಪ್ರೊ.ಮೋಹನ್ ಸಿದ್ದಾಂತಿ, ‘ವಿದ್ಯಾರ್ಥಿಗಳು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಯಶಸ್ಸು ಗಳಿಸಲು ನಿರಂತರ ಪರಿಶ್ರಮ ಅಗತ್ಯ’ ಎಂದರು. ಕಾಲೇಜು ಆಡಳಿತ ಮಂಡಳಿ ಸದಸ್ಯ ಶ್ರೀಧರ್ ಉದಗಟ್ಟಿ ಮಾತನಾಡಿ, ‘ವಿದ್ಯಾರ್ಥಿಗಳು ಜೀವನದಲ್ಲಿ ಮಾನವೀಯ ಮೌಲ್ಯ ಅಳವಡಿಸಿಕೊಂಡು ಸಮಾಜಸೇವೆ ಮಾಡಬೇಕು’ ಎಂದರು. ಈ ವೇಳೆ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನಿಸಿದರು. ವಿದ್ಯಾರ್ಥಿ ಒಕ್ಕೂಟದ ಕಾರ್ಯಾಧ್ಯಕ್ಷೆ ಐಶ್ವರ್ಯ ನಡುವಿನಮನಿ ವಾರ್ಷಿಕ ವರದಿ ಮಂಡಿಸಿದರು. ಉಪನ್ಯಾಸಕರಾದ ಅನುರಾಧ ಹುಯಿಲಗೋಳ, ವಿನೋದಾ ಎಚ್ ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 