ಸಹಕಾರ ಸಂಘಗಳ ಅಭಿವೃದ್ಧಿಗೆ ಒಗ್ಗಟಿನಿಂದ ಶ್ರಮಿಸಬೇಕು: ಶಾಸಕ ವೈದ್ಯ
We should work together for the development of cooperative societies: MLA Vaidya
ಲೋಕದರ್ಶನ ವರದಿ
ಯರಗಟ್ಟಿ 26: ಸಹಕಾರ ಸಂಘಗಳ ಅಭಿವೃದ್ಧಿಗೆ ಎಲ್ಲ ನಿರ್ದೇಶಕರು ಒಗ್ಗಟಿನಿಂದ ಶ್ರಮಿಸಬೇಕು ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು.
ಸಮೀಪದ ಮಬನೂರ ಗ್ರಾಮದ ವಿವಿದ್ದೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ಸಭಾ ಭವನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸಾಲ ವಿತರಣಾ ಸಮಾರಂಭದಲ್ಲಿ ಸಾಲಗಾರರಿಗೆ ಸಾಲ ವಿತರಿಸಿ ಮಾತನಾಡಿ, ಕ್ಷೇತ್ರದ ಅನ್ನದಾತರ ಅಭಿವೃದ್ಧಿಗಾಗಿ ನಮ್ಮ ಸರ್ಕಾರ ಮತ್ತು ನಾನು ಸದಾ ನಿಮ್ಮ ಜೋತೆಗೆ ಇರುತ್ತೆನೆ. ಈ ಸಾಲ ಸೌಲಭ್ಯದ ಸದುಪಯೋಗವನ್ನು ಪ್ರತಿಯೊಬ್ಬ ರೈತರು ಪಡೆದುಕೊಂಡು ಕೃಷಿಯಲ್ಲಿ ಮತಷ್ಟು ಪ್ರಗತಿ ಸಾಧಿಸಲಿ ಎಂದು ಹೇಳಿದರು.
ತಾಲೂಕಾ ಕಾಂಗ್ರೆಸ್ ಮುಖಂಡ ಆರ್.ಕೆ.ಪಟಾತ ಮಾತನಾಡಿ, ಸಾಲಗಾರರು ಪಡೆದ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡಿದರೆ ಠೇವುದಾರರಿಗೆ ಹಣ ಮರಳಿ ಕೊಡಲು ಅನುಕೂಲವಾಗುತ್ತದೆ ಎಂದು ಹೇಳಿದರು.
ಸಂಘದ ಅಧ್ಯಕ್ಷ ಮಹಾದೇವ ಪಟಾತ್, ಜಿಪಂ ಮಾಜಿ ಸದಸ್ಯ ಫಕೀರ್ಪ ಹದ್ದನ್ನವರ, ಬ್ಯಾಂಕ ನೀರೀಕ್ಷಕ ಎಸ್.ಎನ್.ಸಿದ್ದನ್ನವರ, ತಾಲೂಕ ನಿಯಂತ್ರನಾಧಿಕಾರಿ ಚಂದ್ರಶೇಖರ ಕೊರಿ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕುಮಾರ ಅಂಗಡಿ, ವಾಯ್,ಎಸ್,ನರಿ, ಭೀಮಪ್ಪ ಮಳಗಲಿ, ಶಿವಪ್ಪ ಅಗಸಿಮನಿ, ಭೀಮಪ್ಪ ಚುಂಚನೂರ, ವಿಠ್ಠಲ ಮಾದರ, ಹನಮಂತ ಅಗಸಿಮನಿ, ನಿಂಗಪ್ಪ ನರಿ, ರಮೇಶ ಪಟಾತ, ಸಿದ್ದಪ್ಪ ಮಳಗಲಿ, ಪುಂಡಲೀಕ ಮಳಗಲಿ ಮತ್ತಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 