ಅಧಿಕಾರಿಗಳು ಬೀದಿಬದಿ ವ್ಯಾಪಾರಿಗಳಿಗೆ ಕಿರುಕುಳ ನೀಡಿದರೆ ಹೈಕೋರ್ಟ್ ಮೆಟ್ಟಿಲೇರುತ್ತೇವೆ: ಡಾ. ಸಿ.ಇ ರಂಗಸ್ವಾಮಿ
We will move the High Court if the authorities harass street vendors
ಕಾರವಾರ 05 : ಇಲ್ಲಿನ ನಗರಸಭೆ ಸೇರಿದಂತೆ, ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಬೀದಿಬದಿ ವ್ಯಾಪಾರಿಗಳಿಗೆ ಕಿರುಕುಳ ನೀಡಿದರೆ ಹೈಕೋರ್ಟ್ ಮೆಟ್ಟಿಲೇರುತ್ತೇವೆ ಎಂದು ರಾಜ್ಯ ಕಾಂಗ್ರೆಸ್ ಸಮಿತಿಯ ಬೀದಿ ಬದಿ ವ್ಯಾಪಾರಿಗಳ ವಿಭಾಗದ ಅಧ್ಯಕ್ಷ ಡಾ. ಸಿ.ಇ ರಂಗಸ್ವಾಮಿ ಹೇಳಿದರು.
ಕಾರವಾರದ ಸರ್ಕಾರಿ ಅಧೀನದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳ ಅಧೀನದಲ್ಲಿರುವ ಬೀದಿ ಬದಿ ವ್ಯಾಪಾರಿಗಳಿದ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಯ ಅಧ್ಯಕ್ಷರು ಕಿರುಕುಳ ನೀಡುತ್ತಿದ್ದಾರೆ. ಸರಕಾರದ ಆದೇಶದಂತೆ ಬೀದಿ ಬದಿ ವ್ಯಾಪಾರಿಗಳನ್ನು ಒಕ್ಕಲೆಬ್ಬಿಸುವಂತಿಲ್ಲ. ಆದರೆ ವ್ಯಾಪಾರ ಮಾಡುವ ಸ್ಥಳದಲ್ಲಿ ಅವರ ಹೂ, ಹಣ್ಣ ಬಿಟ್ಟಿಗಳನ್ನು ಬಿಸಾಡುತ್ತಿದ್ದಾರೆ. ಈ ಮೂಲಕ ಸರಕಾರದ ಆದೇಶವನ್ನು ಉಲ್ಲಂಘಿಸುತ್ತಿದ್ದಾರೆ ಎಂದರು. ಬೀದಿ ಬದಿ ವ್ಯಾಪಾರಿಗಳಿಗೆ ಪ್ರತ್ಯೇಕ ಮಾರುಕಟ್ಟೆ ತೆರದ ಬಳಿಕ ಗುರುತಿನ ಚೀಟಿ ಹಾಗೂ ಅವರಿಗೆ ಜಾಗ ನಿಗದಿಯಾಗುತ್ತದೆ. ಅದರ ಬಳಿಕವೇ ಸ್ಥಳಾಂತರ ಮಾಡಬೇಕು. ಆದರೆ ಕಾರವಾರದಲ್ಲಿ ಈ ರೀತಿ ಆಗಿಲ್ಲ. ಬೀದಿ ಬದಿ ವ್ಯಾಪಾರಿಗಳ ಸಮಿತಿಯಿಂದ ಮೂರು ತಿಂಗಳಿಗೆ ಒಮ್ಮೆ ಸಭೆ ನಡೆಸಬೇಕು. ಆದರೆ ಕಾರವಾರದಲ್ಲಿ ಈ ನಿಯಮವನ್ನು ಗಾಳಿಗೆ ತೂರಲಾಗಿದೆ. ಬೀದಿ ಬದಿ ವ್ಯಾಪಾರಿ ಎಂದು ನೊಂದಣಿಯಾದವರು ಪೊಲೀಸ್ ತಪಾಸಣೆ ನಡೆಯಬೇಕು. ಹೊರ ಜಿಲ್ಲೆಯವರಿಗೆ ಗುರುತಿನ ಚೀಟಿ ನೀಡಬಾರದು ಎಂದರು.
ನಗರಸಭೆಯಿಂದ ಮೇಳ ಆಯೋಜಿಸಿ ಸ್ವಚ್ಚತೆ, ಆರೋಗ್ಯ ಹಾಗೂ ವಿವಿಧ ಯೋಜನೆಗಳ ಬಗ್ಗೆ ಅರಿವು ಮೂಡಿಸಬೇಕು. ಆದರೆ ಈ ನಿಯಮಗಳನ್ನು ಸ್ಥಳೀಯ ಆಡಳಿತ ಸಂಸ್ಥೆಗಳು ಅನುಸರಿಸುತ್ತಿಲ್ಲ. ಬೀದಿಬದಿ ವ್ಯಾಪಾರಿಗಳ ಮೇಲೆ ಈ ರೀತಿಯ ಕಿರುಕುಳ ಮುಂದುವರೆದರೆ ಹೈಕೋರ್ಟನಲ್ಲಿ ಪ್ರಕರಣ ದಾಖಲಿಸುತ್ತೇವೆ ಎಂದರು. ಸಮಿತಿಯ ರಾಜ್ಯ ಮಹಿಳಾ ವಿಭಾಗದ ಅಧ್ಯಕ್ಷೆ ಕಾವ್ಯಶ್ರೀ ಕೆ.ಎಸ್, ಜಿಲ್ಲಾದ್ಯಕ್ಷ ಫಕೀರಾ್ಪ ಭಂಡಾರಿ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಮಮತಾಜ್ ಆರ್, ಹಬೀಬಿ, ಕಾರವಾರ ಬ್ಲಾಕ್ ಅಧ್ಯಕ್ಷ ಮುಸ್ತಾಕ್, ಜೀವನ ಆರ್ ಪೊಕಳೆ ಹಾಗೂ ಇತರರು ಇದ್ದರು.....
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 