ಹೆಲ್ಮೆಟ್ ಧರಿಸಿ ಜೀವ ಕಾಪಾಡಿಕೊಳ್ಳಿ’
Wear a helmet and save your life
ಲೋಕದರ್ಶನ ವರದಿ
ಹೂವಿನಹಡಗಲಿ 11: ’ಹೆಲ್ಮೆಟ್ ಧರಿಸದವ ರನ್ನು ಹಿಡಿದು ದಂಡ ವಿಧಿಸುವುದು ಪೊಲೀಸರ ಉದ್ದೇಶವಲ್ಲ, ಪ್ರತಿಯೊಬ್ಬರೂ ಹೆಲ್ಮೆಟ್ ಧರಿಸಿ ತಮ್ಮ ಆಮೂಲ್ಯ ಜೀವ ಕಾಪಾಡಿಕೊಳ್ಳಲಿ ಎಂಬ ಸದುದ್ದೇಶ ಪೊಲೀಸ್ ಇಲಾಖೆಯದ್ದಾಗಿದೆ ಎಂದು ಪಿಎಸ್ಐ ಮಣಿಕಂಠ್ ಹೇಳಿದರು.ಪಟ್ಟಣದಲ್ಲಿ ಪೊಲೀಸ್ ಇಲಾಖೆ ಯಿಂದ ಶುಕ್ರವಾರ ಪೊಲೀಸ್ ಠಾಣೆ ಮುಂಭಾಗ,ಶಾಸ್ತ್ರೀಯ ವೃತ್ತ, ಹಳೆ ಬಸ್ ನಿಲ್ದಾಣದಲ್ಲಿ ಬೈಕ್ ತಡೆದು ಹೆಲ್ಮೆಟ್ ಜಾಗೃತಿ ಮೂಡಿಸಲಾಯಿತು. ಅಪಘಾತ ಸಂದರ್ಭದಲ್ಲಿ ತಲೆಗೆ ಪೆಟ್ಟು ಬೀಳುವುದರಿಂದ ಹೆಚ್ಚಾಗಿ ಜನರು ಪ್ರಾಣ ಕಳೆದುಕೊಳ್ಳತ್ತಿದ್ದಾರೆ . ದ್ವಿಚಕ್ರ ವಾಹನ ಚಾಲನೆಯಲ್ಲಿ ಹೆಲ್ಮೆಟ್ ಧರಿಸಿ ಪ್ರಾಣ ಕಾಪಾಡಿಕೊಳ್ಳಿ ಎಂದರು. ಇದೇ ವೇಳೆ ಎ ಎಸ್ ಐ ನಂದಿನಿ, ಕಾನಸ್ಟೆಬಲ್ ಗುರುಬಸವರಾಜ, ಪರಶುರಾಮ, ಮಲ್ಲೇಶ, ಖಲಂದರ ಇದ್ದರು.
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು 