ಹನುಮ ಮಾಲಾಧಾರಿಗಳಿಂದ ಇರುಮುಡಿ ಧಾರಣೆ
Wearing of Irumudi by Hanuman Maladharis
ಲೋಕದರ್ಶನ ವರದಿ
ಕಂಪ್ಲಿ 02: ಪಟ್ಟಣದ ಸೋಮೇಶ್ವರ ದೇವಸ್ಥಾನದ ಹತ್ತಿರದ ಅಯ್ಯಪ್ಪ ಸ್ವಾಮಿ ಮತ್ತು ಗದ್ದಿ ಚೌಡೇಶ್ವರಿ ದೇವಸ್ಥಾನದ ಆವರಣದಲ್ಲಿ ಹನುಮಜಯಂತಿಯ ಪ್ರಯುಕ್ತವಾಗಿ ಹನುಮ ಮಾಲಾಧಾರಿಗಳು ಇರುಮುಡಿ ಧಾರಣೆ ಮತ್ತು ಅನ್ನ ಸಂತರೆ್ಣ ಕಾರ್ಯಕ್ರಮ ಜರುಗಿತು.ಇಂದು ಬೆಳಿಗ್ಗೆ ಅಯ್ಯಪ್ಪಸ್ವಾಮಿಗೆ ಮತ್ತು ಗದ್ದಿ ಚೌಡೇಶ್ವರಿ ದೇವಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದ ನಂತರ ಅಯ್ಯಪ್ಪಸ್ವಾಮಿ ದೇವಸ್ಥಾನದ ಆವರಣದಲ್ಲಿ ವಿಶೇಷ ವೇದಿಕೆಯನ್ನು ನಿರ್ಮಿಸಿ ಆಂಜಿನೇಯನ ಭಾವಚಿತ್ರವನ್ನು ಪ್ರತಿಷ್ಠಾಪಿಸಿ ವಿಶೇಷ ಪೂಜೆಯನ್ನು ಸಲ್ಲಿಸಿದ ನಂತರ ಹನುಮ ಮಾಲಾಧಾರಿಗಳಿಗೆ ಗುರುಸ್ವಾಮಿಗಳು ಇರುಮುಡಿಯನ್ನು ಪೂಜಿಸಿ ಹನುಮ ಮಾಲಾಧಾರಿಗಳ ತಲೆಯ ಮೇಲೆ ಇರಿಸಿ ಪೂಜೆಯನ್ನು ಸಲ್ಲಿಸಿದರು.
ನಂತರ ಇರುಮುಡಿ ಧರಿಸಿದ ಹನುಮ ಮಾಲಾಧಾರಿಗಳಿಗೆ ಕುಟುಂಬದ ಸದಸ್ಯರು ಮಾಲಾರ್ಾಣೆ ಮಾಡಿ ಶುಭ ಹಾರೈಸಿದರು.ಪಟ್ಟಣವೂ ಸೇರಿದಂತೆ ವಿವಿಧ ಗ್ರಾಮಗಳ ಸುಮಾರು 45ಕ್ಕೂ ಅಧಿಕ ಹನುಮನ ಭಕ್ತರು ಹನುಮ ಮಾಲೆಗಳನ್ನು ಧರಿಸಿದ್ದರು. ಇರುಮುಡಿ ಧಾರಣೆ ಕಾರ್ಯಕ್ರಮದಲ್ಲಿ ಶಾಸಕರಾದ ಜೆ.ಎನ್.ಗಣೇಶ್ ಭಾಗವಹಿಸಿ ಆಂಜಿನೇಯನಿಗೆ ವಿಶೇಷ ಪೂಜೆಯನ್ನು ಸಲ್ಲಿಸಿ ಇರುಮುಡಿ ಧರಿಸಿದ ಹನುಮ ಮಾಲಾಧಾರಿಗಳಿಗೆ ಶುಭಕೋರಿದರಲ್ಲದೆ, ನಾಡಿನಲ್ಲಿ ಮಳೆ, ಬೆಳೆ ಉತ್ತಮವಾಗಿ ಆಗಲಿ, ಅನ್ನದಾತರಿಗೆ ಉತ್ತಮ ಮೌಲ್ಯ ದೊರೆಯಲಿ ಎಂದು ಹಾರೈಸಿದರು. ನಂತರ ಅನ್ನಸಂತರೆ್ಣ ಜರುಗಿತು. ಸಂಜೆ ಹನುಮ ಮಾಲಾಧಾರಿಗಳು ಮೆರವಣಿಗೆಯ ಮೂಲಕ ಅಂಜನಾದ್ರಿಯ ಆಂಜಿನೇಯ ಸ್ವಾಮಿಯ ಪುಣ್ಯಕ್ಷೇತ್ರಕ್ಕೆ ಪಾದಾಯತ್ರೆ ಬೆಳೆಸಿದರು. ಪಟ್ಟಣದ ಪ್ರಮುಖ ಬೀದಿಯಲ್ಲಿ ನಡೆದ ಹನುಮ ಮಾಲಾಧಾರಿಗಳ ಪಾದಾಯಾತ್ರೆಗೆ ಸಾರ್ವಜನಿರು ಶುಭಹಾರೈಸಿದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 