ಹನುಮ ಮಾಲಾಧಾರಿಗಳಿಂದ ಇರುಮುಡಿ ಧಾರಣೆ
Wearing of Irumudi by Hanuman Maladharis
ಲೋಕದರ್ಶನ ವರದಿ
ಕಂಪ್ಲಿ 02: ಪಟ್ಟಣದ ಸೋಮೇಶ್ವರ ದೇವಸ್ಥಾನದ ಹತ್ತಿರದ ಅಯ್ಯಪ್ಪ ಸ್ವಾಮಿ ಮತ್ತು ಗದ್ದಿ ಚೌಡೇಶ್ವರಿ ದೇವಸ್ಥಾನದ ಆವರಣದಲ್ಲಿ ಹನುಮಜಯಂತಿಯ ಪ್ರಯುಕ್ತವಾಗಿ ಹನುಮ ಮಾಲಾಧಾರಿಗಳು ಇರುಮುಡಿ ಧಾರಣೆ ಮತ್ತು ಅನ್ನ ಸಂತರೆ್ಣ ಕಾರ್ಯಕ್ರಮ ಜರುಗಿತು.ಇಂದು ಬೆಳಿಗ್ಗೆ ಅಯ್ಯಪ್ಪಸ್ವಾಮಿಗೆ ಮತ್ತು ಗದ್ದಿ ಚೌಡೇಶ್ವರಿ ದೇವಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದ ನಂತರ ಅಯ್ಯಪ್ಪಸ್ವಾಮಿ ದೇವಸ್ಥಾನದ ಆವರಣದಲ್ಲಿ ವಿಶೇಷ ವೇದಿಕೆಯನ್ನು ನಿರ್ಮಿಸಿ ಆಂಜಿನೇಯನ ಭಾವಚಿತ್ರವನ್ನು ಪ್ರತಿಷ್ಠಾಪಿಸಿ ವಿಶೇಷ ಪೂಜೆಯನ್ನು ಸಲ್ಲಿಸಿದ ನಂತರ ಹನುಮ ಮಾಲಾಧಾರಿಗಳಿಗೆ ಗುರುಸ್ವಾಮಿಗಳು ಇರುಮುಡಿಯನ್ನು ಪೂಜಿಸಿ ಹನುಮ ಮಾಲಾಧಾರಿಗಳ ತಲೆಯ ಮೇಲೆ ಇರಿಸಿ ಪೂಜೆಯನ್ನು ಸಲ್ಲಿಸಿದರು.
ನಂತರ ಇರುಮುಡಿ ಧರಿಸಿದ ಹನುಮ ಮಾಲಾಧಾರಿಗಳಿಗೆ ಕುಟುಂಬದ ಸದಸ್ಯರು ಮಾಲಾರ್ಾಣೆ ಮಾಡಿ ಶುಭ ಹಾರೈಸಿದರು.ಪಟ್ಟಣವೂ ಸೇರಿದಂತೆ ವಿವಿಧ ಗ್ರಾಮಗಳ ಸುಮಾರು 45ಕ್ಕೂ ಅಧಿಕ ಹನುಮನ ಭಕ್ತರು ಹನುಮ ಮಾಲೆಗಳನ್ನು ಧರಿಸಿದ್ದರು. ಇರುಮುಡಿ ಧಾರಣೆ ಕಾರ್ಯಕ್ರಮದಲ್ಲಿ ಶಾಸಕರಾದ ಜೆ.ಎನ್.ಗಣೇಶ್ ಭಾಗವಹಿಸಿ ಆಂಜಿನೇಯನಿಗೆ ವಿಶೇಷ ಪೂಜೆಯನ್ನು ಸಲ್ಲಿಸಿ ಇರುಮುಡಿ ಧರಿಸಿದ ಹನುಮ ಮಾಲಾಧಾರಿಗಳಿಗೆ ಶುಭಕೋರಿದರಲ್ಲದೆ, ನಾಡಿನಲ್ಲಿ ಮಳೆ, ಬೆಳೆ ಉತ್ತಮವಾಗಿ ಆಗಲಿ, ಅನ್ನದಾತರಿಗೆ ಉತ್ತಮ ಮೌಲ್ಯ ದೊರೆಯಲಿ ಎಂದು ಹಾರೈಸಿದರು. ನಂತರ ಅನ್ನಸಂತರೆ್ಣ ಜರುಗಿತು. ಸಂಜೆ ಹನುಮ ಮಾಲಾಧಾರಿಗಳು ಮೆರವಣಿಗೆಯ ಮೂಲಕ ಅಂಜನಾದ್ರಿಯ ಆಂಜಿನೇಯ ಸ್ವಾಮಿಯ ಪುಣ್ಯಕ್ಷೇತ್ರಕ್ಕೆ ಪಾದಾಯತ್ರೆ ಬೆಳೆಸಿದರು. ಪಟ್ಟಣದ ಪ್ರಮುಖ ಬೀದಿಯಲ್ಲಿ ನಡೆದ ಹನುಮ ಮಾಲಾಧಾರಿಗಳ ಪಾದಾಯಾತ್ರೆಗೆ ಸಾರ್ವಜನಿರು ಶುಭಹಾರೈಸಿದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 