ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ
Welcome program for students
ತಾಳಿಕೋಟಿ 16: ಶ್ರೀ ಎಸ್.ಎಸ್.ವಿದ್ಯಾಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಬ್ರಹ್ಮಲಿಂಗೇಶ್ವರ ಹಾಗೂ ಶ್ರೀ ಸಂಗಮೇಶ್ವರ ಪ್ರೌಢಶಾಲೆಗೆ 2026-2027 ರ ಶೈಕ್ಷಣಿಕ ಸಾಲಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳನ್ನು ದಿನಾಂಕ 16-06-2026 ರ ಮಂಗವಾರ ಸ್ವಾಗತಿಸಿ ವಿದ್ಯಾರ್ಥಿಗಳಿಗೆ ಪುಷ್ಪಗುಚ್ಚ ನೀಡಿ ಉಚಿತ ಶಾಲಾ ಬ್ಯಾಗ,ಸಮವಸ್ತ್ರ, ಪಠ್ಯ ಪುಸ್ತಕ ನೀಡಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಶ ಎಚ್.ಎಸ್.ಪಾಟೀಲರ ಸರಳ ರೀತಿಯಲ್ಲಿ ಜನ್ಮದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದ ವೇದಿಕೆಯಲ್ಲಿ ಎಚ್.ಎಸ್.ಪಾಟೀಲ, ಪ ಪೂ ಕಾಲೇಜಿನ ಆಂಗ್ಲ ಭಾಷೆಯ ಉಪನ್ಯಾಸಕರಾದ ಪರಶುರಾಮ ಚೌಡಕರ ಮುಖ್ಯ ಅತಿಥಿಯಾಗಿದ್ದರು.
ಸಂಸ್ಥೆಯ ಕಾರ್ಯದರ್ಶಿಗಳಾದ ಸಚಿನ.ಎಚ್.ಪಾಟೀಲ, ಶ್ರೀ ಎಸ್.ಎಸ್.ವಿದ್ಯಾಸಂಸ್ಥೆಯ ಶಾಲಾ ಕಾಲೇಜುಗಳ ಮುಖ್ಯಸ್ಥರು, ಶಿಕ್ಷಕರು ಮತ್ತು ವ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರು ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ನಮ್ಮ ಸಂಸ್ಥೆಯ ಕುಟುಂಬ ಇದ್ದಂತೆ ಎಂದು ಹೇಳಿದರು.ಶಿಕ್ಷಕ ಎಸ್.ಸಿ.ಗುಡಗುಂಟಿ ಸ್ವಾಗತಿಸಿದರು, ಎಸ್.ಎಸ್.ವಿದ್ಯಾ ಸಂಸ್ಥೆಗೆ ಹೊಸದಾಗಿ ಆಗಮಿಸಿದ ಉಪನ್ಯಾಸಕರನ್ನು ಶಿಕ್ಷಕ/ಶಿಕ್ಷಕಿಯರನ್ನು ಹಾಗೂ ಶಾಲಾ ವಾಹನ ಚಾಲಕರನ್ನು ಸ್ವಾಗತಿಸಿಕೊಂಡರು ಮತ್ತು ಸಂಸ್ಥೆಯ ಅದ್ಯಕ್ಷರು ಅವರನ್ನು ಸನ್ಮಾನಿಸಿ ಗೌರವಸಿದರು. ಕಾರ್ಯಕ್ರಮ ಶಿಕ್ಷಕ ಬಿ.ಆಯ್.ಹಿರೇಹೊಳಿ ನಿರೂಪಿಸಿ ವಂದಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 