ಪ್ರತಿಭಟನೆಯ ಸ್ವಾಗತ: ವಿದ್ಯಾರ್ಥಿ ಸಂಘಟನೆ ಎಚ್ಚರಿಕೆ
ಗುವಾಹತಿ, ಜ 8 ಪೌರತ್ವ ತಿದ್ದುಪಡಿ ಕಾಯ್ದೆಗೆ ವಿರೋಧ ಪುನರುಚ್ಚರಿಸಿರುವ ನಾರ್ತ್ ಈಸ್ಟ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎನ್ಇಎಸ್ಓ), ಪ್ರಧಾನಿ ನರೇಂದ್ರ ಮೋದಿ ಈ ಭಾಗಕ್ಕೆ ಬಂದರೆ ಅವರಿಗೆ ಪ್ರತಿಭಟನೆ ಸ್ವಾಗತ ನೀಡುವುದಾಗಿ ಹೇಳಿಕೊಂಡಿದೆ. ನೆಸೊ ಸಂಘಟನೆಯಲ್ಲಿ ಸೇರಿರುವ ಆಲ್ ಅಸ್ಸಾಂ ಸ್ಟೂಡೆಂಟ್ಸ್ ಯೂನಿಯನ್ ಆಫ್ ಅಸ್ಸಾಂ (ಆಸು) ಮುಖಂಡ ಸಮುಜ್ಜಲ್ ಭಟ್ಟಾಚಾರ್ಯ ಈ ಕುರಿತು ಹೇಳಿಕೆ ನೀಡಿ,ನಾವು ಇದೇ 10 ರಿಂದ ಆರಂಭವಾಗುವ ಪರೀಕ್ಷೆಗಳಿಗೆ ಹಾಗೂ ಖೇಲೋ ಇಂಡಿಯಾ ಯುವ ಕ್ರೀಡಾಕೂಟಕ್ಕೆ ಅಡ್ಡಿಪಡಿಸುವುದಿಲ್ಲ. ಆದರೆ ಪ್ರಧಾನಿ ನರೇಂದ್ರ ಮೋದಿ ಅಸ್ಸಾಂಗೆ ಭೇಟಿ ನೀಡಿದರೆ,ಮಾತ್ರ ಅಹಿಂಸಾತ್ಮಕ ಪ್ರತಿಭಟನೆ ಮಾಡುತ್ತೇವೆ ಶಾಂತಿಯುತ ಗಾಂಧೀಜಿ ಮಾದರಿಯ ಪ್ರತಿಭಟನೆ ಮಾಡುವುದಾಗಿ ತಿಳಿಸಿದ್ದಾರೆ . ಸಿಎಎ ಧರ್ಮ ಧರಿತವಾಗಿದ್ದು, ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದ್ದು ಧರ್ಮ, ಜಾತಿ ಆಧಾರದಲ್ಲಿ ತಾರತಮ್ಯ ಸಹಿಸಲು ಆಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 