ಪ್ರಥಮ ಪಿಯು ವಿದ್ಯಾರ್ಥಿಗಳ ಸ್ವಾಗತ ಸಮಾರಂಭ

ಪ್ರಥಮ ಪಿಯು ವಿದ್ಯಾರ್ಥಿಗಳ ಸ್ವಾಗತ ಸಮಾರಂಭ  Welcoming ceremony for first PU students

ಹಾವೇರಿ 30: “ಭಗವಂತ ಸಂಸ್ಥೆ ಬಡ ವಿದ್ಯಾರ್ಥಿಗಳಿಗೆ ಜ್ಞಾನದ ದೀಪವಾಗಿದೆ” ಎಂದು ಪ.ಪೂ. ಕಾಲೇಜು ಉಪನಿರ್ದೇಶಕ ಮಹದೇವಸ್ವಾಮಿ ಹೇಳಿದರು.  ನಗರದ ಹಾನಗಲ್ ರಸ್ತೆಯ ಭಗವಂತ ಪಿಯು ಕಾಲೇಜಿನಲ್ಲಿ ನಡೆದ ಪ್ರಥಮ ಪಿಯು ವಿದ್ಯಾರ್ಥಿಗಳ ಸ್ವಾಗತ ಹಾಗೂ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಪೋಷಕರ ಆಸೆ, ನೀರೀಕ್ಷೆಗಳನ್ನು ಅರಿತು ಶ್ರಮಪಟ್ಟು ಅಧ್ಯಯನ ಮಾಡಬೇಕು ಎಂದು ಸಲಹೆ ನೀಡಿದರು.  ಗುರಿಯನ್ನು ಸ್ಪಷ್ಟವಾಗಿ ನಿಗದಿಪಡಿಸಿಕೊಂಡು ನಿರಂತರ ಪರಿಶ್ರಮದಿಂದ ಮುಂದುವರಿದರೆ ಯಶಸ್ಸು ಸಾಧ್ಯ ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.