ಕೃಷಿ ವಿರೋಧಿ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ರದ್ದತಿಗೆ ವೆಲ್ಫೇರ್ ಪಾರ್ಟಿ ಆಗ್ರಹ
ಬೆಂಗಳೂರು, ಜೂ.13, ಕರ್ನಾಟಕ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ನಿರ್ಧಾರದಿಂದ ಸರ್ಕಾರ ಹಿಂದೆ ಸರಿಯಬೇಕೆಂದು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ರಾಜ್ಯ ಕಾರ್ಯದರ್ಶಿ ಆದಿಲ್ ಪಟೇಲ್ ಒತ್ತಾಯಿಸಿದ್ದಾರೆ.ಸರ್ಕಾರ ರಿಯಲ್ ಎಸ್ಟೇಟ್ ದಂಧೆಕೋರರು, ಬಂಡವಾಳಶಾಹಿಗಳು ಹಾಗೂ ಬಹುರಾಷ್ಟ್ರೀಯ ಕಂಪನಿಗಳ ಒತ್ತಡಕ್ಕೆ ಮಣಿದು 1961ರ ಕರ್ನಾಟಕ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದೆ. ಸರ್ಕಾರದ ಈ ನಡೆ ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದರು.'ಸದ್ಯ ಕೃಷಿಕರಿಗೆ ಮಾತ್ರ ಕೃಷಿ ಭೂಮಿ ಖರೀದಿಗೆ ಅವಕಾಶವಿದೆ.
ಕಾಯ್ದೆ ತಿದ್ದುಪಡಿಯಾದರೆ ಕೃಷಿಕರಲ್ಲದವರಿಗೂ ಕೃಷಿ ಭೂಮಿ ಖರೀದಿಸಲು ಅವಕಾಶ ಸಿಗುತ್ತದೆ. ಇದು ಕೃಷಿ ಕ್ಷೇತ್ರದ ಮೇಲೆ ಪ್ರತಿಗಾಮಿ ಪರಿಣಾಮ ಬೀರುತ್ತದೆ' ಆತಂಕ ವ್ಯಕ್ತಪಡಿಸಿದರು.'ಸರ್ಕಾರ ರೈತರನ್ನು ಬೀದಿಗೆ ತಳ್ಳಿ, ರಿಯಲ್ ಎಸ್ಟೇಟ್ ಉದ್ಯಮಿಗಳ ಹಿತ ಕಾಯಲು ಹೊರಟಿದೆ. ರಿಯಲ್ ಎಸ್ಟೇಟ್ ಉದ್ಯಮಿಗಳ ಕೈಗೊಂಬೆಯಾಗಿರುವ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ. ಎಪಿಎಂಸಿ ಹಾಗೂ ವಿದ್ಯುತ್ ಕಾಯ್ದೆಗೆ ತಿದ್ದುಪಡಿ ತಂದಿದ್ದ ಸರ್ಕಾರ ಇದೀಗ ರೈತರಿಗೆ ಮತ್ತೊಂದು ಆಘಾತ ನೀಡಿದೆ' ಎಂದು ಕಿಡಿಕಾರಿದರು.ಹೋರಾಟದ ಎಚ್ಚರಿಕೆ: 'ದೇಶದಲ್ಲಿ ಶೇ 80ರಷ್ಟು ಸಣ್ಣ ಮತ್ತು ಅತಿ ಸಣ್ಣ ರೈತರಿದ್ದಾರೆ. ಇವರು ಹಣದಾಸೆಗೆ ಭೂಮಿ ಮಾರಾಟ ಮಾಡಿದರೆ ಭವಿಷ್ಯದಲ್ಲಿ ಎಂದಿಗೂ ಜಮೀನು ಖರೀದಿಸಲು ಸಾಧ್ಯವಾಗುವುದಿಲ್ಲ. ರೈತ ಕುಲಕ್ಕೆ ಮಾರಕವಾಗಿರುವ ಕರ್ನಾಟಕ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ನಿರ್ಧಾರವನ್ನು ಸರ್ಕಾರ ಕೈಬಿಡಬೇಕು. ಇಲ್ಲದಿದ್ದರೆ ರಾಜ್ಯದೆಲ್ಲೆಡೆ ಹೋರಾಟ ನಡೆಸುತ್ತೇವೆ' ಎಂದು ಎಚ್ಚರಿಕೆ ನೀಡಿದರು.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 